ಹಿಂದಿನ ಅಧ್ಯಕ್ಷರಾದ ಜೆ.ರಾಮಣ್ಣ ಅವರಿಂದ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ರಾಜ್ಯ ಉಪಾಧ್ಯಕ್ಷರಾಗಿ, ಜಿಲ್ಲಾ ಉಸ್ತುವಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು.
ಬಳಿಕ ಮಾತನಾಡಿದ ರೆಡ್ಡಿ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎರಡರಿಂದ ಆರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಇದಕ್ಕಾಗಿಯೇ ಹತ್ತು ಕ್ಷೇತ್ರದಲ್ಲಿ ಪ್ರವಾಸ ಮಾಡಿ ಕ್ಷೇತ್ರದ ಸ್ಥಿತಿಗತಿ ಅರಿಯಲಾಗುವುದು ಎಂದರು.
ಸಚಿವ ನಾಗೇಂದ್ರ ಅವರಿಗೆ ಒಂದು ನ್ಯಾಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಒಂದು ನ್ಯಾಯವೇ? ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ನಾಗೇಂದ್ರ ಅವರ ಮೇಲೂ 25ಕ್ಕೂ ಹೆಚ್ಚು ಪ್ರಕರಣಗಳಿವೆ. ಅವುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ ಪಡೆಯಲಿ. ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.