<p><strong>ಕೆಂಗೇರಿ:</strong> ಸಕಾಲ ಯೋಜನೆಯಡಿ ‘ಜನಸೇವಕ’ ಕಾರ್ಯಕ್ರಮಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಯಶವಂತಪುರ ಕ್ಷೇತ್ರದ ಉಳ್ಳಾಲ ವಾರ್ಡ್ನಲ್ಲಿ ಯೋಜನೆಗೆ ಚಾಲನೆ ನೀಡಿದ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್, ‘ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವುದು ಯೋಜನೆಯ ಉದ್ದೇಶವಾಗಿದೆ' ಎಂದರು.</p>.<p>‘ಈ ಕಾರ್ಯಕ್ರಮವನ್ನು ರಾಜಧಾನಿಯ ಐದು ವಿಧಾನಸಭಾಕ್ಷೇತ್ರಗಳಲ್ಲಿ ಜಾರಿಗೊಳಿಸಲಾಗಿದ್ದು, ನಂತರ ರಾಜ್ಯದ ಇತರೆಡೆಗಳಲ್ಲಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಹಿರಿಯ ನಾಗರಿಕರು ಸೇರಿದಂತೆ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ’ ಎಂದರು.</p>.<p>‘ಬೆಂಗಳೂರು ಒನ್ ಮಾದರಿಯಲ್ಲಿ ಗ್ರಾಮ ಒನ್ ಸೇವೆಯನ್ನು ಶೀಘ್ರದಲ್ಲಿ ಜಾರಿಗೊಳಿಸಲಾಗುವುದು’ ಎಂದು ಅವರು ಹೇಳಿದರು.</p>.<p>ಕ್ಷೇತ್ರದ ಶಾಸಕರೂ ಆದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ಆಧಾರ್, ಮತದಾರರ ಗುರುತಿನ ಚೀಟಿ, ಪಹಣಿಯಂತ ಅಗತ್ಯ ಸೇವೆಗಳಿಗಾಗಿ ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದ ಜನರಿಗೆ ಈ ಸೇವೆ ಅತ್ಯಂತ ಉಪಯುಕ್ತವಾಗಿದೆ’ ಎಂದರು.</p>.<p>ಸಾಂಕೇತಿಕವಾಗಿ ಯಶವಂತಪುರ ಕ್ಷೇತ್ರದ ಮೂವರು ಫಲಾನುಭವಿಗಳ ಮನೆಗೆ ಹೋಗಿ ಅವರು ಕೋರಿದ್ದ ಸೇವೆಗಳ ದಾಖಲಾತಿಗಳನ್ನು ಸಚಿವರಿಬ್ಬರು ನೀಡಿದರು.</p>.<p>ಜನಸೇವಕ್ ಯೋಜನಾ ನಿರ್ದೇಶಕಿ ಸಿಂಧೂ, ಬಿಬಿಎಂಪಿ ಜಂಟಿ ಆಯುಕ್ತ ನಾಗರಾಜ್, ಎಇಇ ದಯಾನಂದ್, ಆರ್.ಒ ದಯಾನಂದ್, ಎಆರ್ಒ ದೇವರಾಜ್ ಬಿಜೆಪಿ ಮುಖಂಡರಾದ ಅನಿಲ್ ಕುಮಾರ್, ನಿಶಾಂತ್ ಸೋಮಶೇಖರ್, ಬಿಜೆಪಿ ಅಲ್ಪಸಂಖ್ಯಾತರ ಮಹಿಳಾ ಪ್ರಧಾನ ಕಾರ್ಯದರ್ಶಿ ಸಬಿಹಾ ಅಂಜುಂ, ಮಹೇಂದ್ರ ಕಿರಣ್ ಉಪಸ್ಥಿತರಿದ್ದರು.</p>.<p>ಜನಸೇವಕ ಯೋಜನೆಯು ರಾಜಾಜಿನಗರ, ಮಹದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿ, ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಅನುಷ್ಠಾನಗೊಂಡಿದೆ.</p>.<p><strong>ಯಾವ ಸೇವೆಗಳು ಲಭ್ಯ?</strong><br />ಆಧಾರ್ ಕಾರ್ಡ್, ಜಾತಿ/ ಆದಾಯ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ಅಂಗವಿಕಲ/ ವಿಧವಾ ಪಿಂಚಣಿ, ಸಂಧ್ಯಾ ಸುರಕ್ಷಾ ಯೋಜನೆ ಸೇರಿದಂತೆ ಹಾಗೂ ಕಂದಾಯ ಇಲಾಖೆಯ 21 ಸೇವೆಗಳು, ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಸೇವೆಗಳು, ಬಿಬಿಎಂಪಿ ವ್ಯಾಪ್ತಿಯ18 ಸೇವೆಗಳು.</p>.<p>ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯೋಜನೆಗಳು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸೇವೆಗಳು, ಪೊಲೀಸ್ ಇಲಾಖೆಯ ಪ್ರಮುಖ 3 ಸೇವೆಗಳು, ಬಿಪಿಎಲ್ ಪಡಿತರ ಚೀಟಿ, ಇ-ಸ್ಟ್ಯಾಂಪ್, ಸಾರಿಗೆ ಇಲಾಖೆ ಮತ್ತು ಇನ್ನಿತರೆ ಇಲಾಖೆಯ ಸೇವೆಗಳು 'ಜನಸೇವಕ'ದ ಅಡಿ ದೊರೆಯುತ್ತವೆ.<br />ಮಾಹಿತಿಗೆ, 080-44554455, <a href="http://www.janasevaka.karnataka.gov.in" target="_blank">www.janasevaka.karnataka.gov.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಸಕಾಲ ಯೋಜನೆಯಡಿ ‘ಜನಸೇವಕ’ ಕಾರ್ಯಕ್ರಮಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಯಶವಂತಪುರ ಕ್ಷೇತ್ರದ ಉಳ್ಳಾಲ ವಾರ್ಡ್ನಲ್ಲಿ ಯೋಜನೆಗೆ ಚಾಲನೆ ನೀಡಿದ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್, ‘ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವುದು ಯೋಜನೆಯ ಉದ್ದೇಶವಾಗಿದೆ' ಎಂದರು.</p>.<p>‘ಈ ಕಾರ್ಯಕ್ರಮವನ್ನು ರಾಜಧಾನಿಯ ಐದು ವಿಧಾನಸಭಾಕ್ಷೇತ್ರಗಳಲ್ಲಿ ಜಾರಿಗೊಳಿಸಲಾಗಿದ್ದು, ನಂತರ ರಾಜ್ಯದ ಇತರೆಡೆಗಳಲ್ಲಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಹಿರಿಯ ನಾಗರಿಕರು ಸೇರಿದಂತೆ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ’ ಎಂದರು.</p>.<p>‘ಬೆಂಗಳೂರು ಒನ್ ಮಾದರಿಯಲ್ಲಿ ಗ್ರಾಮ ಒನ್ ಸೇವೆಯನ್ನು ಶೀಘ್ರದಲ್ಲಿ ಜಾರಿಗೊಳಿಸಲಾಗುವುದು’ ಎಂದು ಅವರು ಹೇಳಿದರು.</p>.<p>ಕ್ಷೇತ್ರದ ಶಾಸಕರೂ ಆದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ‘ಆಧಾರ್, ಮತದಾರರ ಗುರುತಿನ ಚೀಟಿ, ಪಹಣಿಯಂತ ಅಗತ್ಯ ಸೇವೆಗಳಿಗಾಗಿ ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದ ಜನರಿಗೆ ಈ ಸೇವೆ ಅತ್ಯಂತ ಉಪಯುಕ್ತವಾಗಿದೆ’ ಎಂದರು.</p>.<p>ಸಾಂಕೇತಿಕವಾಗಿ ಯಶವಂತಪುರ ಕ್ಷೇತ್ರದ ಮೂವರು ಫಲಾನುಭವಿಗಳ ಮನೆಗೆ ಹೋಗಿ ಅವರು ಕೋರಿದ್ದ ಸೇವೆಗಳ ದಾಖಲಾತಿಗಳನ್ನು ಸಚಿವರಿಬ್ಬರು ನೀಡಿದರು.</p>.<p>ಜನಸೇವಕ್ ಯೋಜನಾ ನಿರ್ದೇಶಕಿ ಸಿಂಧೂ, ಬಿಬಿಎಂಪಿ ಜಂಟಿ ಆಯುಕ್ತ ನಾಗರಾಜ್, ಎಇಇ ದಯಾನಂದ್, ಆರ್.ಒ ದಯಾನಂದ್, ಎಆರ್ಒ ದೇವರಾಜ್ ಬಿಜೆಪಿ ಮುಖಂಡರಾದ ಅನಿಲ್ ಕುಮಾರ್, ನಿಶಾಂತ್ ಸೋಮಶೇಖರ್, ಬಿಜೆಪಿ ಅಲ್ಪಸಂಖ್ಯಾತರ ಮಹಿಳಾ ಪ್ರಧಾನ ಕಾರ್ಯದರ್ಶಿ ಸಬಿಹಾ ಅಂಜುಂ, ಮಹೇಂದ್ರ ಕಿರಣ್ ಉಪಸ್ಥಿತರಿದ್ದರು.</p>.<p>ಜನಸೇವಕ ಯೋಜನೆಯು ರಾಜಾಜಿನಗರ, ಮಹದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿ, ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಅನುಷ್ಠಾನಗೊಂಡಿದೆ.</p>.<p><strong>ಯಾವ ಸೇವೆಗಳು ಲಭ್ಯ?</strong><br />ಆಧಾರ್ ಕಾರ್ಡ್, ಜಾತಿ/ ಆದಾಯ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ಅಂಗವಿಕಲ/ ವಿಧವಾ ಪಿಂಚಣಿ, ಸಂಧ್ಯಾ ಸುರಕ್ಷಾ ಯೋಜನೆ ಸೇರಿದಂತೆ ಹಾಗೂ ಕಂದಾಯ ಇಲಾಖೆಯ 21 ಸೇವೆಗಳು, ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಸೇವೆಗಳು, ಬಿಬಿಎಂಪಿ ವ್ಯಾಪ್ತಿಯ18 ಸೇವೆಗಳು.</p>.<p>ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯೋಜನೆಗಳು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸೇವೆಗಳು, ಪೊಲೀಸ್ ಇಲಾಖೆಯ ಪ್ರಮುಖ 3 ಸೇವೆಗಳು, ಬಿಪಿಎಲ್ ಪಡಿತರ ಚೀಟಿ, ಇ-ಸ್ಟ್ಯಾಂಪ್, ಸಾರಿಗೆ ಇಲಾಖೆ ಮತ್ತು ಇನ್ನಿತರೆ ಇಲಾಖೆಯ ಸೇವೆಗಳು 'ಜನಸೇವಕ'ದ ಅಡಿ ದೊರೆಯುತ್ತವೆ.<br />ಮಾಹಿತಿಗೆ, 080-44554455, <a href="http://www.janasevaka.karnataka.gov.in" target="_blank">www.janasevaka.karnataka.gov.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>