ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯಂತೆ, ಸೋಂಕು ಹರಡದಂತೆ ತಡೆಯಲು ರಜೆ ಪಡೆಯದೇ, ಹಗಲಿರುಳು ಬಿಡುವಿಲ್ಲದೇ ದುಡಿಯುತ್ತಿರುವ ವೈದ್ಯರು, ಶುಶ್ರೂಷಕರು, ಅರೆವೈದ್ಯಕೀಯ ಸಿಬ್ಬಂದಿ, ಸ್ಥಳೀಯಾಡಳಿತ ಸಂಸ್ಥೆ ಸಿಬ್ಬಂದಿ, ವಿಮಾನ ನಿಲ್ದಾಣ ಸಿಬ್ಬಂದಿ, ಪೊಲೀಸರು, ಭದ್ರತಾ ಸಿಬ್ಬಂದಿ, ಮಾಧ್ಯಮ ಸಿಬ್ಬಂದಿಯ ತ್ಯಾಗಕ್ಕೆ ಜನರು ಸಾಮೂಹಿಕವಾಗಿ ಗೌರವ ಸಲ್ಲಿಸಿದರು.