‘ಗದಗ ಮತ್ತು ಬೆಳಗಾವಿ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆಸಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತ್ಯಧಿಕ 2,100 ಅಹವಾಲುಗಳು ಬಂದಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆಗಳಿವೆ. ಒಟ್ಟು 6,663 ಅಹವಾಲುಗಳನ್ನು ವಿಲೇವಾರಿಗಾಗಿ ವಿವಿಧ ಇಲಾಖೆಗಳಿಗೆ ರವಾನಿಸಲಾಗಿದೆ’ ಎಂದು ಮುಖ್ಯಮಂತ್ರಿಯವರ ಸಚಿವಾಲಯದ ಪ್ರಕಟಣೆ ತಿಳಿಸಿದೆ.