ಹೆಗ್ಗನಹಳ್ಳಿಯ ಜಿಕೆಡಬ್ಲ್ಯೂ ಬಡಾವಣೆಯಲ್ಲಿ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಜನ ಸಾಲಗಾರರಾಗಬೇಡಿ, ಶುಲ್ಕ ಭರಿಸಲು ಕಣ್ಣೀರು ಹಾಕಬೇಡಿ, ಬದಲಿಗೆ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಿ. ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಉತ್ತಮ ಶಿಕ್ಷಣ ಒದಗಿಸುವ ಶಾಲೆ ನಿರ್ಮಿಸಲಾಗುವುದು’ ಎಂದರು.