ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಇಕೆಬಾನ, ಪುಷ್ಪ ಭಾರತಿ, ತರಕಾರಿ ಕೆತ್ತನೆ, ಒಣ ಹೂವಿನ ಜೋಡಣೆ, ಥಾಯ್ ಆರ್ಟ್, ತೆಂಗಿನ ಗರಿಯ ಚಿತ್ತಾರದಿಂದ ಕೂಡಿದ ಜಾನೂರ್ ಕಲೆ, ಡಚ್ ಹೂವಿನ ಜೋಡಣೆ ಮತ್ತು ಬೋನ್ಸಾಯ್ ಗಿಡಗಳ ಪ್ರದರ್ಶನವನ್ನು ಸಾಹಿತಿ ಎ.ಜಿ. ರತ್ನ ಕಾಳೇಗೌಡ ಉದ್ಘಾಟಿಸಿದರು.