ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರವೇ ಬೆಂಬಲ ಕೋರಿದ ಜವರಾಯಿ ಗೌಡ

Last Updated 1 ಡಿಸೆಂಬರ್ 2019, 11:08 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಯಶವಂತಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎಂ.ನಾರಾಯಣಗೌಡ ಅವರ ನಾಗರಬಾವಿಯಲ್ಲಿರುವ ಮನೆಗೆ ಭೇಟಿ ನೀಡಿ ಜೆಡಿಎಸ್‌ಗೆ ಬೆಂಬಲ ನೀಡುವಂತೆ ಕೋರಿದರು. ಬಳಿಕ ಪರಿಯಪ್ಪನಪಾಳ್ಯದಲ್ಲಿ ಮತ ಯಾಚಿಸಿ, ‘ಎರಡು ಬಾರಿ ಪರಾಜಿತನಾಗಿದ್ದು, ಈ ಸಲ ಗೆಲ್ಲಿಸುವ ಮೂಲಕ ಜನರ ಸೇವೆಗೆ ಅವಕಾಶ ನೀಡಬೇಕು’ ಎಂದರು.

ಜೆಡಿಎಸ್‌ ಮುಖಂಡ ಹನುಮಂತರಾಯಪ್ಪ, ‘ಪಕ್ಷಾಂತರ ಮಾಡಿದ ಶಾಸಕರಿಗೆ ವಿವಿಧ ರಾಜ್ಯಗಳಲ್ಲಿ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ನಮ್ಮ ರಾಜ್ಯದಲ್ಲೂ ಪಕ್ಷಾಂತರಿಗಳನ್ನು ಸೋಲಿಸಬೇಕು’ ಎಂದು ಮನವಿ ಮಾಡಿದರು.

ಬಿಜೆಪಿ ಪ್ರಚಾರ: ‘ಕಳೆದ 20 ವರ್ಷಗಳಿಂದ ಕ್ಷೇತ್ರದ ಜನರ ಜತೆ ಇದ್ದೇನೆ. ಸೋತಾಗಲೂ ನಾನು ಕ್ಷೇತ್ರ ಬಿಟ್ಟು ಹೋಗಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ಜವರಾಯಿಗೌಡ ಕಾಣೆಯಾಗುತ್ತಾರೆ. 5 ವರ್ಷ ಕ್ಷೇತ್ರದ ಕಡೆ ತಿರುಗಿಯೂ ನೋಡುವುದಿಲ್ಲ’ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಟೀಕಿಸಿದರು. ಕೆಂಚನಪುರ, ಸೂಲಿಕೆರೆ, ದೊಡ್ಡಬಸ್ತಿಯಲ್ಲಿ ಪ್ರಚಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT