ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯದೇವ ಆಸ್ಪತ್ರೆಯಲ್ಲಿ ದಾಂಧಲೆ; ಇಬ್ಬರ ಬಂಧನ

Last Updated 5 ಆಗಸ್ಟ್ 2020, 16:37 IST
ಅಕ್ಷರ ಗಾತ್ರ

ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿ ಕಿಟಕಿ ಹಾಗೂ ಬಾಗಿಲುಗಳ ಗಾಜು ಒಡೆದು ಹಾಕಿದ್ದ ಆರೋಪದಡಿ ಇಬ್ಬರನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.

‘ಸಯ್ಯದ್ ಖಾಸಿರ್ ಮತ್ತು ವಸೀಂ ಪಾಷಾ ಬಂಧಿತರು. ಇದೇ 2ರಂದು ನಡೆದಿದ್ದದಾಂದಲೆ ಸಂಬಂಧ ಆಸ್ಪತ್ರೆಯವರು ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.

‘ಎದೆನೋವಿನಿಂದ ಬಳಲುತ್ತಿದ್ದ ಡಿ.ಜೆ.ಹಳ್ಳಿಯ ನಿವಾಸಿ ಅನ್ವರ್ ಪಾಷಾ ಎಂಬುವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅನ್ಸರ್‌ ಪಾಷಾ ಮೃತಪಟ್ಟಿದ್ದರು. ಅದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಹಾಗೂ ಅವರ ಕಡೆಯವರು, ಆಸ್ಪತ್ರೆಗೆ ನುಗ್ಗಿ ದಾಂದಲೆ ಮಾಡಿದ್ದರು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT