<p><strong>ಬೆಂಗಳೂರು</strong>: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ 150 ಮಂದಿಗೆ ಉಚಿತ ಸ್ಟೆಂಟ್ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಇದೇ 24ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದೆ.</p>.<p>ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಹಾಗೂ ಅಮೆರಿಕದ ಮೆಡ್ಟ್ರಾನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಸೆ.24 ಹಾಗೂ ಸೆ.25ರಂದು ಸಂಸ್ಥೆಯ ಮೈಸೂರು ಶಾಖೆ, ಸೆ.26ರಿಂದ ಸೆ.28ರವರೆಗೆ ಬೆಂಗಳೂರಿನ ಸಂಸ್ಥೆಯ ಆವರದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. </p>.<p>‘ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಹಿರಿಯ ನಾಗರಿಕರಿಗಾಗಿ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತಮಟ್ಟದ ಸ್ಟೆಂಟ್ಗಳನ್ನು ಉಚಿತವಾಗಿ ಅಳವಡಿಸಲಾಗುತ್ತದೆ. ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಹರು ಸೆ.21ರೊಳಗೆ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>ಸಂಪರ್ಕಕ್ಕೆ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ 150 ಮಂದಿಗೆ ಉಚಿತ ಸ್ಟೆಂಟ್ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಇದೇ 24ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದೆ.</p>.<p>ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಹಾಗೂ ಅಮೆರಿಕದ ಮೆಡ್ಟ್ರಾನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಸೆ.24 ಹಾಗೂ ಸೆ.25ರಂದು ಸಂಸ್ಥೆಯ ಮೈಸೂರು ಶಾಖೆ, ಸೆ.26ರಿಂದ ಸೆ.28ರವರೆಗೆ ಬೆಂಗಳೂರಿನ ಸಂಸ್ಥೆಯ ಆವರದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. </p>.<p>‘ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಹಿರಿಯ ನಾಗರಿಕರಿಗಾಗಿ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತಮಟ್ಟದ ಸ್ಟೆಂಟ್ಗಳನ್ನು ಉಚಿತವಾಗಿ ಅಳವಡಿಸಲಾಗುತ್ತದೆ. ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಹರು ಸೆ.21ರೊಳಗೆ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>ಸಂಪರ್ಕಕ್ಕೆ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>