ಜಯಮಹಲ್ ರಸ್ತೆಯನ್ನು ಮೇಖ್ರಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದವರೆಗೆ ಹಾಗೂ ಬಳ್ಳಾರಿ ರಸ್ತೆಯನ್ನು ಬಿಡಿಎ ಜಂಕ್ಷನ್ನಿಂದ ಮೇಖ್ರಿ ವೃತ್ತದವರೆಗೆ ವಿಸ್ತರಿಸಲು ಬಿಬಿಎಂಪಿ 2009ರಲ್ಲೇ ಯೋಜನೆ ರೂಪಿಸಿತ್ತು. ಈ ಕಾಮಗಾರಿಗಳಿಗೆ ಅರಮನೆ ಮೈದಾನದ ಆಸ್ತಿಯಲ್ಲಿ 15 ಎಕರೆ 39 ಗುಂಟೆ ಜಾಗದ ಅವಶ್ಯಕತೆ ಇದ್ದು, ಸ್ವಾಧೀನಪಡಿಸಿಕೊಂಡು ಟಿಡಿಆರ್ ನೀಡುವ ಪ್ರಸ್ತಾವ ಸರ್ಕಾರದ ಮುಂದಿದೆ.