‘ಸ್ಥಳೀಯರಿಗೆ ಮಾಹಿತಿ ನೀಡದೆಯೇ ಎಲ್ಲೆಂದರಲ್ಲಿ ರಸ್ತೆಗಳಲ್ಲಿ ಒಎಫ್ಸಿ ಕೇಬಲ್ ಅಳವಡಿಕೆಗೆ ಗುಂಡಿಗಳನ್ನು ತೋಡಲಾಗಿದೆ. ಇದರಿಂದ ಮರಗಳ ಬೇರುಗಳು ತುಂಡಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಒಂದು ವೇಳೆ ಒಎಫ್ಸಿ ಕೇಬಲ್ ಅಳವಡಿಕೆ ಮಾಡಲೇಬೇಕಾದಲ್ಲಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರಿಗೆ ಸಮಸ್ಯೆಯಾಗದ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಿ’ ಎಂದು ರಂಗ ನಿರ್ದೇಶಕ ಹಾಗೂ ಸ್ಥಳೀಯ ನಿವಾಸಿ ಎಸ್. ರಘುನಂದನ್ ತಿಳಿಸಿದರು.