<p><strong>ರಾಜರಾಜೇಶ್ವರಿ ನಗರ:</strong>‘ಶ್ರೀಮಂತಿಕೆ, ಅಧಿಕಾರ ಎಂದಿಗೂ ಶಾಶ್ವತವಲ್ಲ ಹೃದಯವಂತಿಕೆಯ ಹಣತೆ ಪ್ರಜ್ವಲಿಸಬೇಕಾಗಿದೆ ಎಂದು ಕವಿ ಜಯಂತ್ ಕಾಯ್ಕಿಣಿ ಅವರು ಅಭಿಪ್ರಾಯಪಟ್ಟರು.</p>.<p>ಪೂರ್ಣಪ್ರಜ್ಞ ಬಡಾವಣೆಯಲ್ಲಿ ಸಂಧ್ಯಾದೀಪ ಟ್ರಸ್ಟ್(ರಿ) ವಯೋವೃದ್ಧರ ಕ್ಷೇಮಾಕಾಂಕ್ಷಿ ಸಂಸ್ಥೆಯ 28ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ‘ಜಾತಿ, ಮತ, ಭೇದ– ಭಾವವಿಲ್ಲದೆ ವಯೋವೃದ್ಧರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಂಧ್ಯಾದೀಪ ಟ್ರಸ್ಟ್ನಲ್ಲಿ ಮಾತೃಭಾವನೆ ಕಾಣಬಹುದು’ ಎಂದರು.</p>.<p>‘ನಿರಂತರವಾದ ಶೋಷಣೆಯಿಂದ ಕಲುಷಿತ ವಾತಾವರಣ ನಿರ್ಮಾಣಗೊಂಡು ರಾಜಕಾರಣಿಗಳು, ಸಾದು<br />ಸಂತರು ತಮ್ಮ ಪ್ರವೃತ್ತಿಯನ್ನು ಬದಲಿಸಿಕೊಂಡು ವಿಶಾಲ ಹೃದಯವಂತಿಕೆ ಮೈಗೂಡಿಸಿಕೊಳ್ಳುವ ಮೂಲಕ ಸಾರ್ವಜನಿಕರ ಹೃದಯವನ್ನು ತಮ್ಮ ಹೃದಯದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಆಗ ಮಾತ್ರ ಮಾನವೀಯತೆಯ ಮೌಲ್ಯಗಳು ಉಳಿಯುತ್ತವೆ’ ಎಂದರು.</p>.<p>ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್, ‘ಹಿರಿಯ ಚೇತನಗಳು ಪ್ರಜೆಗಳ ಯೋಗಕ್ಷೇಮವನ್ನು ಸರ್ಕಾರಗಳು ನೋಡಿಕೊಳ್ಳಬೇಕು. ಅಂತಹ ಕೆಲಸವನ್ನು ಬಿಟ್ಟು ರಾಜಕಾರಣಿಗಳು ಜಾತಿ, ಧರ್ಮದ ಹೆಸರೇಳಿಕೊಂಡು ಅಧಿಕಾರವನ್ನು ಅನುಭವಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಂಧ್ಯಾದೀಪ ಟ್ರಸ್ಟ್ (ರಿ) ಅಧ್ಯಕ್ಷೆ ರತ್ನಮ್ಮ.ಎಂ.ಶ್ರೀನಿವಾಸ್ ಮಾತನಾಡಿ, ‘ನೊಂದ ಹಿರಿಯ ಜೀವಗಳನ್ನು ಒಂದೆಡೆ ಸೇರಿಸಿ ಅವರನ್ನು ಮಕ್ಕಳಂತೆ ಕಂಡು ಸೇವೆಯನ್ನು ಟ್ರಸ್ಟ್ ನಡೆಸಿಕೊಂಡು ಬರಲಾಗುತ್ತಿದೆ’ಎಂದರು. ಬೇಲಿ ಮಠದ ಪೀಠಾಧ್ಯಕ್ಷ ಶ್ರೀ ಶಿವರುದ್ರಸ್ವಾಮೀಜಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong>‘ಶ್ರೀಮಂತಿಕೆ, ಅಧಿಕಾರ ಎಂದಿಗೂ ಶಾಶ್ವತವಲ್ಲ ಹೃದಯವಂತಿಕೆಯ ಹಣತೆ ಪ್ರಜ್ವಲಿಸಬೇಕಾಗಿದೆ ಎಂದು ಕವಿ ಜಯಂತ್ ಕಾಯ್ಕಿಣಿ ಅವರು ಅಭಿಪ್ರಾಯಪಟ್ಟರು.</p>.<p>ಪೂರ್ಣಪ್ರಜ್ಞ ಬಡಾವಣೆಯಲ್ಲಿ ಸಂಧ್ಯಾದೀಪ ಟ್ರಸ್ಟ್(ರಿ) ವಯೋವೃದ್ಧರ ಕ್ಷೇಮಾಕಾಂಕ್ಷಿ ಸಂಸ್ಥೆಯ 28ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ‘ಜಾತಿ, ಮತ, ಭೇದ– ಭಾವವಿಲ್ಲದೆ ವಯೋವೃದ್ಧರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಂಧ್ಯಾದೀಪ ಟ್ರಸ್ಟ್ನಲ್ಲಿ ಮಾತೃಭಾವನೆ ಕಾಣಬಹುದು’ ಎಂದರು.</p>.<p>‘ನಿರಂತರವಾದ ಶೋಷಣೆಯಿಂದ ಕಲುಷಿತ ವಾತಾವರಣ ನಿರ್ಮಾಣಗೊಂಡು ರಾಜಕಾರಣಿಗಳು, ಸಾದು<br />ಸಂತರು ತಮ್ಮ ಪ್ರವೃತ್ತಿಯನ್ನು ಬದಲಿಸಿಕೊಂಡು ವಿಶಾಲ ಹೃದಯವಂತಿಕೆ ಮೈಗೂಡಿಸಿಕೊಳ್ಳುವ ಮೂಲಕ ಸಾರ್ವಜನಿಕರ ಹೃದಯವನ್ನು ತಮ್ಮ ಹೃದಯದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಆಗ ಮಾತ್ರ ಮಾನವೀಯತೆಯ ಮೌಲ್ಯಗಳು ಉಳಿಯುತ್ತವೆ’ ಎಂದರು.</p>.<p>ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್, ‘ಹಿರಿಯ ಚೇತನಗಳು ಪ್ರಜೆಗಳ ಯೋಗಕ್ಷೇಮವನ್ನು ಸರ್ಕಾರಗಳು ನೋಡಿಕೊಳ್ಳಬೇಕು. ಅಂತಹ ಕೆಲಸವನ್ನು ಬಿಟ್ಟು ರಾಜಕಾರಣಿಗಳು ಜಾತಿ, ಧರ್ಮದ ಹೆಸರೇಳಿಕೊಂಡು ಅಧಿಕಾರವನ್ನು ಅನುಭವಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಂಧ್ಯಾದೀಪ ಟ್ರಸ್ಟ್ (ರಿ) ಅಧ್ಯಕ್ಷೆ ರತ್ನಮ್ಮ.ಎಂ.ಶ್ರೀನಿವಾಸ್ ಮಾತನಾಡಿ, ‘ನೊಂದ ಹಿರಿಯ ಜೀವಗಳನ್ನು ಒಂದೆಡೆ ಸೇರಿಸಿ ಅವರನ್ನು ಮಕ್ಕಳಂತೆ ಕಂಡು ಸೇವೆಯನ್ನು ಟ್ರಸ್ಟ್ ನಡೆಸಿಕೊಂಡು ಬರಲಾಗುತ್ತಿದೆ’ಎಂದರು. ಬೇಲಿ ಮಠದ ಪೀಠಾಧ್ಯಕ್ಷ ಶ್ರೀ ಶಿವರುದ್ರಸ್ವಾಮೀಜಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>