<p>ಬೆಂಗಳೂರು: ನಟಿಯರಾದ ಜಯಪ್ರದಾ, ಊರ್ವಶಿ, ಮಹಾಲಕ್ಷ್ಮೀ, ಪ್ರಮೀಳಾ ಜೋಷಾಯ್, ಹಿನ್ನೆಲೆ ಗಾಯಕಿ ಮಂಜುಳಾ ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ‘ದಿಟ್ಟ ಮಹಿಳೆ’ ಪ್ರಶಸ್ತಿ ನೀಡಲಾಗುತ್ತಿದೆ.</p>.<p>ಜಿಬಿಎ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್ಕುಮಾರ್ ಗಾಜಿನ ಮನೆಯಲ್ಲಿ ಮಾರ್ಚ್ 9ರಂದು ನಡೆಯಲಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಹಾಗೂ ಪಾಲಿಕೆ ಅಧಿಕಾರಿಗಳಿಗೆ ದಿಟ್ಟ ಮಹಿಳೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.</p>.<p>ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಐಎಎಸ್ ಅಧಿಕಾರಿ ಪಿ.ಎಸ್ ರವೀಂದ್ರ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ನಟಿ ವಿನಯಾ ಪ್ರಸಾದ್ ಹಾಗೂ ಐದು ನಗರ ಪಾಲಿಕೆಗಳ ಆಯುಕ್ತರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.</p>.<p>ನಟಿಯರ ಜೊತೆಗೆ ಮಾಧ್ಯಮ, ಪೊಲೀಸ್ ಇಲಾಖೆ, ಕ್ರೀಡೆ, ಸಮಾಜ ಸೇವಕರು ಹಾಗೂ ಮಹಿಳಾ ವಕೀಲರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ದಿಟ್ಟ ಮಹಿಳೆಯರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.</p>.<p>ಜಿಬಿಎಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಮತ್ತು ನೌಕರರಾದ ಡಾ. ದಿವ್ಯ, ವರಲಕ್ಷ್ಮೀ, ವಿಜಯಲಕ್ಷ್ಮೀ, ತನುಜಾ, ಕೃತಿಕಾ, ಶಿಲ್ಪಾ, ಪದ್ಮಜಾ ನಾಯಕ್, ಶುಭಮಂಗಳ, ಅನಿತಾ ಗ್ರೇಸಿ, ಚಂದ್ರಕಲಾ, ಗಂಗಮ್ಮ, ಲತಾ ಹಾಗೂ ತೇಜಾವತಿ ಅವರಿಗೆ ‘ದಿಟ್ಟ ಮಹಿಳಾ’ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಟಿಯರಾದ ಜಯಪ್ರದಾ, ಊರ್ವಶಿ, ಮಹಾಲಕ್ಷ್ಮೀ, ಪ್ರಮೀಳಾ ಜೋಷಾಯ್, ಹಿನ್ನೆಲೆ ಗಾಯಕಿ ಮಂಜುಳಾ ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ‘ದಿಟ್ಟ ಮಹಿಳೆ’ ಪ್ರಶಸ್ತಿ ನೀಡಲಾಗುತ್ತಿದೆ.</p>.<p>ಜಿಬಿಎ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್ಕುಮಾರ್ ಗಾಜಿನ ಮನೆಯಲ್ಲಿ ಮಾರ್ಚ್ 9ರಂದು ನಡೆಯಲಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಹಾಗೂ ಪಾಲಿಕೆ ಅಧಿಕಾರಿಗಳಿಗೆ ದಿಟ್ಟ ಮಹಿಳೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.</p>.<p>ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಐಎಎಸ್ ಅಧಿಕಾರಿ ಪಿ.ಎಸ್ ರವೀಂದ್ರ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ನಟಿ ವಿನಯಾ ಪ್ರಸಾದ್ ಹಾಗೂ ಐದು ನಗರ ಪಾಲಿಕೆಗಳ ಆಯುಕ್ತರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.</p>.<p>ನಟಿಯರ ಜೊತೆಗೆ ಮಾಧ್ಯಮ, ಪೊಲೀಸ್ ಇಲಾಖೆ, ಕ್ರೀಡೆ, ಸಮಾಜ ಸೇವಕರು ಹಾಗೂ ಮಹಿಳಾ ವಕೀಲರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ದಿಟ್ಟ ಮಹಿಳೆಯರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.</p>.<p>ಜಿಬಿಎಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಮತ್ತು ನೌಕರರಾದ ಡಾ. ದಿವ್ಯ, ವರಲಕ್ಷ್ಮೀ, ವಿಜಯಲಕ್ಷ್ಮೀ, ತನುಜಾ, ಕೃತಿಕಾ, ಶಿಲ್ಪಾ, ಪದ್ಮಜಾ ನಾಯಕ್, ಶುಭಮಂಗಳ, ಅನಿತಾ ಗ್ರೇಸಿ, ಚಂದ್ರಕಲಾ, ಗಂಗಮ್ಮ, ಲತಾ ಹಾಗೂ ತೇಜಾವತಿ ಅವರಿಗೆ ‘ದಿಟ್ಟ ಮಹಿಳಾ’ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>