<p><strong>ಬೆಂಗಳೂರು</strong>: ‘ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.</p>.<p>‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಹೆಜ್ಜೆ ಹಾಕಿ, ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು.</p>.<p>‘ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಮಕ್ಕಳ ರೈಲುಗಳ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.</p>.<p>ಪಾಲಿಕೆ ಆಯುಕ್ತರು ಹಾಗೂ ಜೆ.ಪಿ.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. </p>.<p>ಪ್ರತಿದಿನ ಎಲ್ಲ ಶೌಚಾಲಯಗಳಿಗೆ ಬೀಗ ಹಾಕುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದರು. ಪ್ರತ್ಯೇಕ ವಿಶ್ರಾಂತಿ ಕುಟೀರ ಬೇಕು ಎಂದು ಮಹಿಳಾ ನಡಿಗೆದಾರರು ಬೇಡಿಕೆ ಇಟ್ಟರು.</p>.<p>ಸಹಾಯವಾಣಿಗೆ ಕರೆ ಮಾಡಿ: ‘ಉದ್ಯಾನದ ಅಧ್ವಾನಗಳನ್ನು ನಾನೇ ಕಣ್ಣಾರೆ ನೋಡಿದ್ದೇನೆ. ಅದರ ವಿಡಿಯೊ ಚಿತ್ರೀಕರಣ ಕೂಡ ಮಾಡಿಸಿದ್ದೇನೆ. ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಕುಂದುಕೊರತೆಗಳು, ಸಮಸ್ಯೆಗಳು ಕಂಡುಬಂದರೆ 1533 ಸಹಾಯವಾಣಿಗೆ ಕರೆ ಮಾಡಿ ನಿಮ್ಮ ಅಹವಾಲನ್ನು ಸಲ್ಲಿಸಬಹುದು’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>‘ರಾಜಕುಮಾರ್ ರಸ್ತೆಯಲ್ಲಿನ ಕಸದ ಸಮಸ್ಯೆ, ಮಂಗನಪಾಳ್ಯದ ಬಳಿ ಕೆಳ ಸೇತುವೆ ನಿರ್ಮಾಣ, ಗಂಗಮ್ಮ ಸರ್ಕಲ್ ಬಳಿಯ ಸಮಸ್ಯೆಗಳು ಸೇರಿದಂತೆ ಎಲ್ಲರ ಅಹವಾಲುಗಳಿಗೆ ನಮ್ಮ ಅಧಿಕಾರಿಗಳು ನಿಮ್ಮ ಬಳಿ ಬಂದು ಪರಿಹಾರ ಒದಗಿಸುತ್ತಾರೆ’ ಎಂದರು.</p>.<p>ಜೆ.ಪಿ.ಪಾರ್ಕ್ ವ್ಯಾಪ್ತಿಯಲ್ಲಿ ಸುಮಾರು 44 ಕಾಮಗಾರಿಗಳು ಮಂಜೂರಾಗಿ ಶೇ 80 ರಷ್ಟು ಹಣ ಬಿಡುಗಡೆಯಾಗಿದ್ದರೂ ಯಾವುದೇ ಕಾಮಗಾರಿಗಳು ನಡೆದಿಲ್ಲ ಎಂದು ಆರ್ಟಿಐ ಕಾರ್ಯಕರ್ತ ವಿನ್ಸೆಂಟ್ ಬರ್ನಾಡ್ ದೂರಿದಾಗ ‘ಈ ಬಗ್ಗೆ ತನಿಖೆ ಮಾಡುವಂತೆ ಸೂಚಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>ರಾಕ್ಲೈನ್ ಮಾಲ್ ಬಳಿ ರಸ್ತೆಗುಂಡಿ ಹಾಗೂ ದಾಸರಹಳ್ಳಿ ಪಾಲಿಕೆ ಕಚೇರಿಯಲ್ಲಿ ಅಧಿಕಾರಿಗಳ ಕೊರತೆ ಬಗ್ಗೆ ದಾಸರಹಳ್ಳಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಸಿ ಅಶೋಕ್ ಗಮನ ಸೆಳೆದರು.</p>.<p>ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.</p>.<p>‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಹೆಜ್ಜೆ ಹಾಕಿ, ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು.</p>.<p>‘ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಮಕ್ಕಳ ರೈಲುಗಳ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.</p>.<p>ಪಾಲಿಕೆ ಆಯುಕ್ತರು ಹಾಗೂ ಜೆ.ಪಿ.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. </p>.<p>ಪ್ರತಿದಿನ ಎಲ್ಲ ಶೌಚಾಲಯಗಳಿಗೆ ಬೀಗ ಹಾಕುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದರು. ಪ್ರತ್ಯೇಕ ವಿಶ್ರಾಂತಿ ಕುಟೀರ ಬೇಕು ಎಂದು ಮಹಿಳಾ ನಡಿಗೆದಾರರು ಬೇಡಿಕೆ ಇಟ್ಟರು.</p>.<p>ಸಹಾಯವಾಣಿಗೆ ಕರೆ ಮಾಡಿ: ‘ಉದ್ಯಾನದ ಅಧ್ವಾನಗಳನ್ನು ನಾನೇ ಕಣ್ಣಾರೆ ನೋಡಿದ್ದೇನೆ. ಅದರ ವಿಡಿಯೊ ಚಿತ್ರೀಕರಣ ಕೂಡ ಮಾಡಿಸಿದ್ದೇನೆ. ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಕುಂದುಕೊರತೆಗಳು, ಸಮಸ್ಯೆಗಳು ಕಂಡುಬಂದರೆ 1533 ಸಹಾಯವಾಣಿಗೆ ಕರೆ ಮಾಡಿ ನಿಮ್ಮ ಅಹವಾಲನ್ನು ಸಲ್ಲಿಸಬಹುದು’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>‘ರಾಜಕುಮಾರ್ ರಸ್ತೆಯಲ್ಲಿನ ಕಸದ ಸಮಸ್ಯೆ, ಮಂಗನಪಾಳ್ಯದ ಬಳಿ ಕೆಳ ಸೇತುವೆ ನಿರ್ಮಾಣ, ಗಂಗಮ್ಮ ಸರ್ಕಲ್ ಬಳಿಯ ಸಮಸ್ಯೆಗಳು ಸೇರಿದಂತೆ ಎಲ್ಲರ ಅಹವಾಲುಗಳಿಗೆ ನಮ್ಮ ಅಧಿಕಾರಿಗಳು ನಿಮ್ಮ ಬಳಿ ಬಂದು ಪರಿಹಾರ ಒದಗಿಸುತ್ತಾರೆ’ ಎಂದರು.</p>.<p>ಜೆ.ಪಿ.ಪಾರ್ಕ್ ವ್ಯಾಪ್ತಿಯಲ್ಲಿ ಸುಮಾರು 44 ಕಾಮಗಾರಿಗಳು ಮಂಜೂರಾಗಿ ಶೇ 80 ರಷ್ಟು ಹಣ ಬಿಡುಗಡೆಯಾಗಿದ್ದರೂ ಯಾವುದೇ ಕಾಮಗಾರಿಗಳು ನಡೆದಿಲ್ಲ ಎಂದು ಆರ್ಟಿಐ ಕಾರ್ಯಕರ್ತ ವಿನ್ಸೆಂಟ್ ಬರ್ನಾಡ್ ದೂರಿದಾಗ ‘ಈ ಬಗ್ಗೆ ತನಿಖೆ ಮಾಡುವಂತೆ ಸೂಚಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>ರಾಕ್ಲೈನ್ ಮಾಲ್ ಬಳಿ ರಸ್ತೆಗುಂಡಿ ಹಾಗೂ ದಾಸರಹಳ್ಳಿ ಪಾಲಿಕೆ ಕಚೇರಿಯಲ್ಲಿ ಅಧಿಕಾರಿಗಳ ಕೊರತೆ ಬಗ್ಗೆ ದಾಸರಹಳ್ಳಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಸಿ ಅಶೋಕ್ ಗಮನ ಸೆಳೆದರು.</p>.<p>ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>