‘ದೇಶದ ಶೇ 52ರಷ್ಟು ಜನರನ್ನು ಕೃಷಿಯಿಂದ ಹೊರಗಿಡುವ ಹುನ್ನಾರ ನಡೆಯುತ್ತಿದೆ. ಇದು ಸಾಕಾರಗೊಂಡರೆ ಜನ ಹಸಿವಿನಿಂದ ಸಾಯಲಿದ್ದಾರೆ. ಈಗಿನ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಸಂಸತ್ ನಿಯಮಗಳನ್ನು ಗಾಳಿಗೆ ತೂರಿ ರೈತರ ಬದುಕಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಅನುಷ್ಠಾನಗೊಳಿಸಿದೆ.ದೇಶದಲ್ಲಿ ಶೇ 85ಕ್ಕಿಂತ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ. ಇವರನ್ನು ಗಮನದಲ್ಲಿಟ್ಟುಕೊಂಡು ಕೃಷಿ ನೀತಿ ಸಿದ್ಧಪಡಿಸಬೇಕು. ಹಾಗಾದಾಗಅವರ ಬದುಕು ಹಸನಾಗಬಹುದು’ ಎಂದರು.