ಸ್ಥಳಕ್ಕೆ ಧಾವಿಸಿದ ಸುರೇಶ್, ‘ನೋಡಲ್ ಅಧಿಕಾರಿಗಳನ್ನು ನೇಮಿಸಿರುವುದು ಜನರೊಂದಿಗೆ ಸಮನ್ವಯ ಸಾಧಿಸಲು ಹೊರತು ಜನರ ಜೊತೆ ದರ್ಪದಿಂದ ವರ್ತಿಸುವುದಕ್ಕಲ್ಲ. ಅಂಗವಿಕಲರು, ಬಡವರು ಜೀವನೋಪಾಯಕ್ಕೆ ವ್ಯಾಪಾರ ಮಾಡುತ್ತಿದ್ದಾರೆ. ನೋಡಲ್ ಅಧಿಕಾರಿಯಾಗಿ ಮಾಡಬೇಕಾದ ಬೇರೆ ಕೆಲಸ ಬಹಳಷ್ಟಿದೆ. ಮೊದಲು ಅವುಗಳನ್ನು ಮಾಡಿ’ ಎಂದು ನೋಡಲ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.