<p><strong>ಬೆಂಗಳೂರು:</strong> ಸಾಲ ತೀರಿಸುವ ಸಲುವಾಗಿ ನೆರೆಮನೆಗೆ ನುಗ್ಗಿ, ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿ ಗಣೇಶ್ (26) ಎಂಬಾತನನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೋಳಿ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಆರೋಪಿ ಅದರಿಂದ ನಷ್ಟ ಅನುಭವಿಸಿದ್ದ. ₹1 ಲಕ್ಷದವರೆಗೂ ಸಾಲ ಮಾಡಿಕೊಂಡಿದ್ದ. ಸಾಲಗಾರರು ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಹೀಗಾಗಿ ಕಳ್ಳತನ ಮಾಡಲು ನಿರ್ಧರಿಸಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘62 ವರ್ಷ ವಯಸ್ಸಿನ ಶಾಂತಮ್ಮ ಎಂಬುವರು ಮಾರಪ್ಪ ಗಾರ್ಡನ್ನ 4ನೇ ತಿರುವಿನಲ್ಲಿ ವಾಸವಿದ್ದಾರೆ. ಅವರ ಮನೆಯ ಪಕ್ಕದಲ್ಲೇ ಆರೋಪಿಯ ಅಜ್ಜಿಯೂ ನೆಲೆಸಿದ್ದಾರೆ. ಅಜ್ಜಿ ಮನೆಗೆ ಬಂದಿದ್ದ ಆತ ಶಾಂತಮ್ಮನವರ ಕೊರಳಿನಲ್ಲಿ ಚಿನ್ನದ ಸರ ಇರುವುದನ್ನು ಗಮನಿಸಿದ್ದ. ಶಾಂತಮ್ಮ ಮಗ ಎಂದಿನಂತೆಯೇ ಕೆಲಸಕ್ಕೆ ಹೋಗಿದ್ದರು. ಈ ಸಮಯಕ್ಕಾಗಿಯೇ ಕಾಯುತ್ತಿದ್ದ ಆತ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿದ್ದ. ಅವರು ಪ್ರಜ್ಞೆ ತಪ್ಪಿದ ನಂತರ ಕೊರಳಿನಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಲ ತೀರಿಸುವ ಸಲುವಾಗಿ ನೆರೆಮನೆಗೆ ನುಗ್ಗಿ, ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿ ಗಣೇಶ್ (26) ಎಂಬಾತನನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೋಳಿ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಆರೋಪಿ ಅದರಿಂದ ನಷ್ಟ ಅನುಭವಿಸಿದ್ದ. ₹1 ಲಕ್ಷದವರೆಗೂ ಸಾಲ ಮಾಡಿಕೊಂಡಿದ್ದ. ಸಾಲಗಾರರು ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಹೀಗಾಗಿ ಕಳ್ಳತನ ಮಾಡಲು ನಿರ್ಧರಿಸಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘62 ವರ್ಷ ವಯಸ್ಸಿನ ಶಾಂತಮ್ಮ ಎಂಬುವರು ಮಾರಪ್ಪ ಗಾರ್ಡನ್ನ 4ನೇ ತಿರುವಿನಲ್ಲಿ ವಾಸವಿದ್ದಾರೆ. ಅವರ ಮನೆಯ ಪಕ್ಕದಲ್ಲೇ ಆರೋಪಿಯ ಅಜ್ಜಿಯೂ ನೆಲೆಸಿದ್ದಾರೆ. ಅಜ್ಜಿ ಮನೆಗೆ ಬಂದಿದ್ದ ಆತ ಶಾಂತಮ್ಮನವರ ಕೊರಳಿನಲ್ಲಿ ಚಿನ್ನದ ಸರ ಇರುವುದನ್ನು ಗಮನಿಸಿದ್ದ. ಶಾಂತಮ್ಮ ಮಗ ಎಂದಿನಂತೆಯೇ ಕೆಲಸಕ್ಕೆ ಹೋಗಿದ್ದರು. ಈ ಸಮಯಕ್ಕಾಗಿಯೇ ಕಾಯುತ್ತಿದ್ದ ಆತ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿದ್ದ. ಅವರು ಪ್ರಜ್ಞೆ ತಪ್ಪಿದ ನಂತರ ಕೊರಳಿನಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>