‘62 ವರ್ಷ ವಯಸ್ಸಿನ ಶಾಂತಮ್ಮ ಎಂಬುವರು ಮಾರಪ್ಪ ಗಾರ್ಡನ್ನ 4ನೇ ತಿರುವಿನಲ್ಲಿ ವಾಸವಿದ್ದಾರೆ. ಅವರ ಮನೆಯ ಪಕ್ಕದಲ್ಲೇ ಆರೋಪಿಯ ಅಜ್ಜಿಯೂ ನೆಲೆಸಿದ್ದಾರೆ. ಅಜ್ಜಿ ಮನೆಗೆ ಬಂದಿದ್ದ ಆತ ಶಾಂತಮ್ಮನವರ ಕೊರಳಿನಲ್ಲಿ ಚಿನ್ನದ ಸರ ಇರುವುದನ್ನು ಗಮನಿಸಿದ್ದ. ಶಾಂತಮ್ಮ ಮಗ ಎಂದಿನಂತೆಯೇ ಕೆಲಸಕ್ಕೆ ಹೋಗಿದ್ದರು. ಈ ಸಮಯಕ್ಕಾಗಿಯೇ ಕಾಯುತ್ತಿದ್ದ ಆತ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿದ್ದ. ಅವರು ಪ್ರಜ್ಞೆ ತಪ್ಪಿದ ನಂತರ ಕೊರಳಿನಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದ’ ಎಂದು ಹೇಳಿದ್ದಾರೆ.