ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮಿ,‘28ರಂದು ತಾಲ್ಲೂಕು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ ಹಾಗೂ ಗ್ರಾಮೀಣ ಬಂದ್ ಇರಲಿದೆ. ಬ್ಯಾಂಕ್, ವಿಮೆ, ಆದಾಯ ತೆರಿಗೆ, ಅಂಚೆ ಸೇರಿದಂತೆ ಎಲ್ಲ ರೀತಿಯ ಕೇಂದ್ರ ಸೇವೆಗಳು ಎರಡೂ ದಿನ ಸ್ಥಗಿತಗೊಳ್ಳಲಿವೆ. ಮುಷ್ಕರದ ಭಾಗವಾಗಿ29ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದರು.