‘ಸದನದಲ್ಲಿ ಸದಸ್ಯರು ಮಾತನಾಡುವಾಗ ಭೋಜೇಗೌಡರು ಅಡ್ಡಿ ಪಡಿಸುವುದು ಸರಿಯಲ್ಲ. ಹೊಸದಾಗಿ ಆಯ್ಕೆ ಆಗಿ ಬಂದಿರುವ ಅವರು ಕಲಾಪವನ್ನು ನೋಡಿ ಕಲಿಯಬೇಕು. ಸುಮ್ಮನೆ ಗದ್ದಲ ಎಬ್ಬಿಸುವುದು ಸರಿಯಲ್ಲ’ ಎಂದು ವಿರೋಧ ಪಕ್ಷದ ನಾಯಕ ಶ್ರೀನಿವಾಸ ಪೂಜಾರಿ, ಕೆ.ಬಿ.ಶಾಣಪ್ಪ, ಆಯನೂರು ಮಂಜುನಾಥ್ ಮತ್ತು ಇತರ ಸದಸ್ಯರೂ ಆಕ್ಷೇಪ ವ್ಯಕ್ತಪಡಿಸಿದರು.