<p><strong>ಬೆಂಗಳೂರು:</strong> ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮೊಂದಿಗೆ ಮಾತನಾಡಿಲ್ಲ ಎಂದು ದೂರಿದ ಕಾರ್ಯಕರ್ತರು, ಅವರ ಸಮ್ಮುಖದಲ್ಲೇ ಕೂಗಾಟ, ನೂಕಾಟ ನಡೆಸಿ ವಾಗ್ಯುದ್ದಕ್ಕಿಳಿದ ಪ್ರಸಂಗ ಪಕ್ಷದ ಕಚೇರಿಯಲ್ಲಿ ಗುರುವಾರ ನಡೆಯಿತು.</p>.<p>ದಾವಣಗೆರೆ, ಚಿತ್ರದುರ್ಗ ಮತ್ತು ಹೊಳಲ್ಕೆರೆ ಭಾಗದ ಕಾರ್ಯಕರ್ತರ ಸಭೆ ನಡೆಯುತ್ತಿತ್ತು. ದೇವೇಗೌಡರನ್ನು ಮಾತನಾಡಿಸಲು ಹಲವು ಕಾರ್ಯಕರ್ತರು ಬಯಸಿದ್ದರು. ಆದರೆ ಅವರಿಗೆ ಅವಕಾಶ ಸಿಗಲಿಲ್ಲ.</p>.<p>ದೇವೇಗೌಡರು ಮಾಧ್ಯಮದವರ ಬಳಿಗೆ ಹೋಗುತ್ತಿದ್ದಂತೆಯೇ ಕಾರ್ಯಕರ್ತರು ಪರಸ್ಪರ ತಳ್ಳಾಟ, ಕೂಗಾಟಕ್ಕೆ ತೊಡಗಿದರು. ಆದರೆ ಕ್ಯಾಮೆರಾ ಕಣ್ಣುಗಳು ತಮ್ಮನ್ನು ಸೆರೆ ಹಿಡಿಯುತ್ತಿವೆ ಎಂಬ ಅರಿವಾದೊಡನೆ ಅವರೆಲ್ಲರೂ ಸಿಟ್ಟನ್ನು ಬದಿಗಿಟ್ಟು, ಮುಖದಲ್ಲಿ ನಗು ತರಿಸಿಕೊಂಡರು. ಈ ಮಧ್ಯೆ, ಅನರ್ಹ ಶಾಸಕ ಕೆ.ಗೋಪಾಲಯ್ಯ ಪ್ರತಿನಿಧಿಸಿದ್ದಮಹಾಲಕ್ಷ್ಮಿ ಲೇಔಟ್ ಕ್ಷೇತ್ರವನ್ನುಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಆರಂಭವಾಗಿದ್ದು, ಗುರುವಾರ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮೊಂದಿಗೆ ಮಾತನಾಡಿಲ್ಲ ಎಂದು ದೂರಿದ ಕಾರ್ಯಕರ್ತರು, ಅವರ ಸಮ್ಮುಖದಲ್ಲೇ ಕೂಗಾಟ, ನೂಕಾಟ ನಡೆಸಿ ವಾಗ್ಯುದ್ದಕ್ಕಿಳಿದ ಪ್ರಸಂಗ ಪಕ್ಷದ ಕಚೇರಿಯಲ್ಲಿ ಗುರುವಾರ ನಡೆಯಿತು.</p>.<p>ದಾವಣಗೆರೆ, ಚಿತ್ರದುರ್ಗ ಮತ್ತು ಹೊಳಲ್ಕೆರೆ ಭಾಗದ ಕಾರ್ಯಕರ್ತರ ಸಭೆ ನಡೆಯುತ್ತಿತ್ತು. ದೇವೇಗೌಡರನ್ನು ಮಾತನಾಡಿಸಲು ಹಲವು ಕಾರ್ಯಕರ್ತರು ಬಯಸಿದ್ದರು. ಆದರೆ ಅವರಿಗೆ ಅವಕಾಶ ಸಿಗಲಿಲ್ಲ.</p>.<p>ದೇವೇಗೌಡರು ಮಾಧ್ಯಮದವರ ಬಳಿಗೆ ಹೋಗುತ್ತಿದ್ದಂತೆಯೇ ಕಾರ್ಯಕರ್ತರು ಪರಸ್ಪರ ತಳ್ಳಾಟ, ಕೂಗಾಟಕ್ಕೆ ತೊಡಗಿದರು. ಆದರೆ ಕ್ಯಾಮೆರಾ ಕಣ್ಣುಗಳು ತಮ್ಮನ್ನು ಸೆರೆ ಹಿಡಿಯುತ್ತಿವೆ ಎಂಬ ಅರಿವಾದೊಡನೆ ಅವರೆಲ್ಲರೂ ಸಿಟ್ಟನ್ನು ಬದಿಗಿಟ್ಟು, ಮುಖದಲ್ಲಿ ನಗು ತರಿಸಿಕೊಂಡರು. ಈ ಮಧ್ಯೆ, ಅನರ್ಹ ಶಾಸಕ ಕೆ.ಗೋಪಾಲಯ್ಯ ಪ್ರತಿನಿಧಿಸಿದ್ದಮಹಾಲಕ್ಷ್ಮಿ ಲೇಔಟ್ ಕ್ಷೇತ್ರವನ್ನುಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಆರಂಭವಾಗಿದ್ದು, ಗುರುವಾರ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>