ಬೆಂಗಳೂರು:ರಾಜ್ಯದಲ್ಲಿ ಪ್ರವಾಹದಿಂದ ಸುಮಾರು ಎರಡು ಕೋಟಿಯಷ್ಟು ಜನರಿಗೆ ತೊಂದರೆಯಾಗಿದ್ದು, ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರ ರೂಪದಲ್ಲಿ ₹ 5 ಸಾವಿರ ಕೋಟಿ ನೆರವು ನೀಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.ಪ್ರವಾಹ ಪರಿಸ್ಥಿತಿ ಕೊಂಚ ಇಳಿದ ಮೇಲೆ ಪ್ರವಾಸ ಮಾಡುತ್ತೇನೆ.ಎಲ್ಲೆಲ್ಲಿ ಏನೇನು ಸಮಸ್ಯೆ ಆಗಿದೆ ಎಂದು ಖುದ್ದು ಮಾಹಿತಿ ಪಡೆಯುತ್ತೇನೆ’ ಎಂದರು.