ದೇಶದ ಏಳು ಮಹಾನದಿಗಳ ಹೆಸರಿನಲ್ಲಿ ಇರಿಸಲಾಗಿದ್ದ ಹದಿನೈದು ಪುಟ್ಟ ಕಲಶಗಳಿಗೆ ಕುಮಾರಸ್ವಾಮಿ ಅವರು ಶಾಸ್ತ್ರಬದ್ಧವಾಗಿ ಪೂಜೆ, ವಿಧಿ ವಿಧಾನ ನೆರವೇರಿಸಿದರು. ಬಳಿಕ, ಬ್ರಹ್ಮಕಲಶ ಪ್ರತಿಷ್ಠಾಪನೆ ನಡೆಯಿತು. ರಾಜ್ಯದ ಉದ್ದಗಲಕ್ಕೂ ಸಂಗ್ರಹಿಸಿದ್ದ ಜಲವನ್ನು ಅದಕ್ಕೆ ತುಂಬಿಸಲಾಯಿತು. ಮೊದಲು, ಕುಮಾರಸ್ವಾಮಿ ಅವರು ಪುಟ್ಟ ಕಲಶದ ಮೂಲಕ ಬ್ರಹ್ಮಕಲಶಕ್ಕೆ ಪವಿತ್ರ ಜಲವನ್ನು ತುಂಬಿಸಿದರು.