<p><strong>ಬೆಂಗಳೂರು: </strong>ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ನಡೆಸಿದ ಅಪಪ್ರಚಾರವೇ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಹಿನ್ನಡೆಗೆ ಕಾರಣ ಎಂದು ಜೆಡಿಎಸ್ ವಕ್ತಾರ ಟಿ.ಎ. ಶರವಣ ಹೇಳಿದ್ದಾರೆ.</p>.<p>ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಎರಡು ಕ್ಷೇತ್ರಗಳ ಫಲಿತಾಂಶದಿಂದ ಜೆಡಿಎಸ್ ಪಕ್ಷದ ಸಾಮರ್ಥ್ಯ ಅಳೆಯಲು ಸಾಧ್ಯವಿಲ್ಲ. ಜನ ಕೊಟ್ಟಿರುವ ತೀರ್ಪನ್ನು ನಾವು ತಲೆಬಾಗಿ ಸ್ವೀಕರಿಸುತ್ತೇವೆ. ಬಿಜೆಪಿ ಮತ್ತು ಕಾಂಗ್ರೆಸ್ ಹಣದ ಬಲ, ಅಧಿಕಾರದ ಬಲ ಬಳಸಿ ಗೆದ್ದಿವೆ’ ಎಂದಿದ್ದಾರೆ.</p>.<p>ಈ ಫಲಿತಾಂಶದಿಂದ ಜೆಡಿಎಸ್ ಧೈರ್ಯ ಕಳೆದುಕೊಳ್ಳುವುದಿಲ್ಲ. ಜನಪರ ರಾಜಕಾರಣ ಮುಂದುವರಿಯಲಿದೆ. ಅನೈತಿಕ ರಾಜಕಾರಣವನ್ನು ತಮ್ಮ ಪಕ್ಷ ಮಾಡುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಬಿಜೆಪಿ, ಕಾಂಗ್ರೆಸ್ ಬಣ್ಣ ಬಯಲಾಗಲಿದೆ. ಜನದ್ರೋಹಿ ರಾಜಕಾರಣವನ್ನು ಮೀರಿ ಜೆಡಿಎಸ್ ಎದ್ದು ಬರಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ನಡೆಸಿದ ಅಪಪ್ರಚಾರವೇ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಹಿನ್ನಡೆಗೆ ಕಾರಣ ಎಂದು ಜೆಡಿಎಸ್ ವಕ್ತಾರ ಟಿ.ಎ. ಶರವಣ ಹೇಳಿದ್ದಾರೆ.</p>.<p>ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಎರಡು ಕ್ಷೇತ್ರಗಳ ಫಲಿತಾಂಶದಿಂದ ಜೆಡಿಎಸ್ ಪಕ್ಷದ ಸಾಮರ್ಥ್ಯ ಅಳೆಯಲು ಸಾಧ್ಯವಿಲ್ಲ. ಜನ ಕೊಟ್ಟಿರುವ ತೀರ್ಪನ್ನು ನಾವು ತಲೆಬಾಗಿ ಸ್ವೀಕರಿಸುತ್ತೇವೆ. ಬಿಜೆಪಿ ಮತ್ತು ಕಾಂಗ್ರೆಸ್ ಹಣದ ಬಲ, ಅಧಿಕಾರದ ಬಲ ಬಳಸಿ ಗೆದ್ದಿವೆ’ ಎಂದಿದ್ದಾರೆ.</p>.<p>ಈ ಫಲಿತಾಂಶದಿಂದ ಜೆಡಿಎಸ್ ಧೈರ್ಯ ಕಳೆದುಕೊಳ್ಳುವುದಿಲ್ಲ. ಜನಪರ ರಾಜಕಾರಣ ಮುಂದುವರಿಯಲಿದೆ. ಅನೈತಿಕ ರಾಜಕಾರಣವನ್ನು ತಮ್ಮ ಪಕ್ಷ ಮಾಡುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಬಿಜೆಪಿ, ಕಾಂಗ್ರೆಸ್ ಬಣ್ಣ ಬಯಲಾಗಲಿದೆ. ಜನದ್ರೋಹಿ ರಾಜಕಾರಣವನ್ನು ಮೀರಿ ಜೆಡಿಎಸ್ ಎದ್ದು ಬರಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>