<p><strong>ಬೆಂಗಳೂರು:</strong> ‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಜೆಡಿಎಸ್ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ಗೌಡ ದೂರಿದರು.</p>.<p>ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಅವರು ಪಕ್ಷದ ಮುಖಂಡರ ಜತೆಗೆ ಮಂಗಳವಾರ ಸಭೆ ನಡೆಸಿದರು. </p>.<p>‘ಮುಂದಿನ ವರ್ಷ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು, ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಕ್ಷಕರ ನೋಂದಣಿ ಮಾಡಿಸಬೇಕು’ ಎಂದು ಹೇಳಿದರು. </p>.<p>‘ರಾಜ್ಯ ಸರ್ಕಾರವು ನಿರುದ್ಯೋಗ ಸಮಸ್ಯೆ ತೊಡೆದು ಹಾಕಿ, ಪದವೀಧರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಯುವನಿಧಿ ‘ಗ್ಯಾರಂಟಿ’ಯನ್ನೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಈ ವಿಷಯಗಳನ್ನು ಇಟ್ಟುಕೊಂಡು ನಾವು ಶಿಕ್ಷಕರನ್ನು ಸಂಘಟಿಸಬೇಕು’ ಎಂದರು. </p>.<p>‘ಮೇಲ್ಮನೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕು’ ಎಂದು ಹೇಳಿದರು. </p>.<p>ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ, ಶಾಸಕರಾದ ಜವರಾಯಿ ಗೌಡ, ಟಿ.ಎ. ಶರವಣ, ಮಾಜಿ ಶಾಸಕರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ಪಕ್ಷದ ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಜೆಡಿಎಸ್ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ಗೌಡ ದೂರಿದರು.</p>.<p>ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಅವರು ಪಕ್ಷದ ಮುಖಂಡರ ಜತೆಗೆ ಮಂಗಳವಾರ ಸಭೆ ನಡೆಸಿದರು. </p>.<p>‘ಮುಂದಿನ ವರ್ಷ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು, ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಕ್ಷಕರ ನೋಂದಣಿ ಮಾಡಿಸಬೇಕು’ ಎಂದು ಹೇಳಿದರು. </p>.<p>‘ರಾಜ್ಯ ಸರ್ಕಾರವು ನಿರುದ್ಯೋಗ ಸಮಸ್ಯೆ ತೊಡೆದು ಹಾಕಿ, ಪದವೀಧರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಯುವನಿಧಿ ‘ಗ್ಯಾರಂಟಿ’ಯನ್ನೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಈ ವಿಷಯಗಳನ್ನು ಇಟ್ಟುಕೊಂಡು ನಾವು ಶಿಕ್ಷಕರನ್ನು ಸಂಘಟಿಸಬೇಕು’ ಎಂದರು. </p>.<p>‘ಮೇಲ್ಮನೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕು’ ಎಂದು ಹೇಳಿದರು. </p>.<p>ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ, ಶಾಸಕರಾದ ಜವರಾಯಿ ಗೌಡ, ಟಿ.ಎ. ಶರವಣ, ಮಾಜಿ ಶಾಸಕರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ಪಕ್ಷದ ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>