ಮಂಗಳವಾರ ಇಲ್ಲಿ ಕೊನೆಗೊಂಡ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿಯ ಬಳಿಕ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ‘ನೀವು ದೆಹಲಿಗೆ ಬಂದು ಕುಳಿತುಕೊಳ್ಳಿ, ಜನತಾ ಪರಿವಾರದಿಂದ ಹೊರಗೆ ಹೋದವರನ್ನು ಕರೆತರಬಹುದು ಎಂದು ಹಲವರು ಹೇಳುತ್ತಿದ್ದಾರೆ, ಆದರೆ ಅದು ಅಷ್ಟು ಸುಲಭದ ಮಾತಲ್ಲ, ಅವರಿಗಾಗಿ ಸಮಯ ವ್ಯರ್ಥ ಮಾಡುವುದರಲ್ಲಿ ಅರ್ಥವಿಲ್ಲ’ ಎಂದರು.