ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಸಮಿತಿಯ ಸಂಚಾಲಕರಾಗಿದ್ದು, ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್. ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ಕೆ.ವಿ. ನಾರಾಯಣಸ್ವಾಮಿ, ಎಚ್.ಎಂ. ರಮೇಶ್ ಗೌಡ, ಮಾಜಿ ಸದಸ್ಯ ಟಿ.ಎ. ಶರವಣ, ಪಕ್ಷದ ರಾಜ್ಯ ‘ಕೋರ್’ ಸಮಿತಿ ಸದಸ್ಯ ವಿ. ನಾರಾಯಣಸ್ವಾಮಿ, ಪಕ್ಷದ ಬೆಂಗಳೂರು ಮಹಾನಗರ ಮಹಿಳಾ ಘಟಕದ ಅಧ್ಯಕ್ಷೆ ರುತ್ ಮನೋರಮಾ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಇಮ್ರಾನ್ ಪಾಷ ಸದಸ್ಯರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ.