ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಚುನಾವಣೆ ತಯಾರಿ ಸಮಿತಿ ರಚಿಸಿದ ಜೆಡಿಎಸ್‌

Last Updated 29 ಮೇ 2021, 20:52 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಪೂರಕವಾಗಿ ಪಕ್ಷ ಸಂಘಟಿಸಲು ಮತ್ತು ಚುನಾವಣಾ ಸಿದ್ಧತೆಗಳನ್ನು ನಡೆಸಲು ಜೆಡಿಎಸ್‌ ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಸಮಿತಿ ರಚಿಸಿದೆ.

ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್‌. ಪ್ರಕಾಶ್‌ ಸಮಿತಿಯ ಸಂಚಾಲಕರಾಗಿದ್ದು, ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್‌. ಮಂಜುನಾಥ್‌, ವಿಧಾನಪರಿಷತ್‌ ಸದಸ್ಯರಾದ ಕೆ.ವಿ. ನಾರಾಯಣಸ್ವಾಮಿ, ಎಚ್‌.ಎಂ. ರಮೇಶ್‌ ಗೌಡ, ಮಾಜಿ ಸದಸ್ಯ ಟಿ.ಎ. ಶರವಣ, ಪಕ್ಷದ ರಾಜ್ಯ ‘ಕೋರ್‌’ ಸಮಿತಿ ಸದಸ್ಯ ವಿ. ನಾರಾಯಣಸ್ವಾಮಿ, ಪಕ್ಷದ ಬೆಂಗಳೂರು ಮಹಾನಗರ ಮಹಿಳಾ ಘಟಕದ ಅಧ್ಯಕ್ಷೆ ರುತ್‌ ಮನೋರಮಾ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಇಮ್ರಾನ್‌ ಪಾಷ ಸದಸ್ಯರಾಗಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT