<p><strong>ಬೆಂಗಳೂರು</strong>: ವಿಧಾನಸೌಧದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಕೆಲವು ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಜೆಡಿಎಸ್ ನಗರ ಘಟಕದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.</p>.<p>ಜೆಡಿಎಸ್ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>‘ಸರ್ಕಾರದ್ದು ಸರ್ವಾಧಿಕಾರಿ ಧೋರಣೆ. ಕಾಂಗ್ರೆಸ್ ಇನ್ನೂ ತುರ್ತು ಪರಿಸ್ಥಿತಿಯ ಮನಃಸ್ಥಿತಿಯಿಂದ ಹೊರ ಬಂದಿಲ್ಲ’ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯ ಮಾಧ್ಯಮ ನಾಲ್ಕನೇ ಅಂಗವಾಗಿದೆ. ಅದರ ಹೊಣೆಗಾರಿಕೆ ಮಹತ್ವದ್ದು. ಹೀಗಾಗಿ ಕೂಡಲೇ ಈ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದು ಒತ್ತಾಯ ಮಾಡಿದರು.</p>.<p>ಮಾಜಿ ಶಾಸಕ ಕೆ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸೌಧದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಕೆಲವು ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಜೆಡಿಎಸ್ ನಗರ ಘಟಕದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.</p>.<p>ಜೆಡಿಎಸ್ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>‘ಸರ್ಕಾರದ್ದು ಸರ್ವಾಧಿಕಾರಿ ಧೋರಣೆ. ಕಾಂಗ್ರೆಸ್ ಇನ್ನೂ ತುರ್ತು ಪರಿಸ್ಥಿತಿಯ ಮನಃಸ್ಥಿತಿಯಿಂದ ಹೊರ ಬಂದಿಲ್ಲ’ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯ ಮಾಧ್ಯಮ ನಾಲ್ಕನೇ ಅಂಗವಾಗಿದೆ. ಅದರ ಹೊಣೆಗಾರಿಕೆ ಮಹತ್ವದ್ದು. ಹೀಗಾಗಿ ಕೂಡಲೇ ಈ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದು ಒತ್ತಾಯ ಮಾಡಿದರು.</p>.<p>ಮಾಜಿ ಶಾಸಕ ಕೆ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>