<p><strong>ಬೆಂಗಳೂರು: </strong>ರಾಜ್ಯದಲ್ಲಿ 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>‘ಪ್ರಶಾಂತ್ ಜತೆಗೆ ಮೊದಲ ಸುತ್ತಿನ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಅವರು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಸರ್ಕಾರ ಟೇಕ್ ಆಫ್ ಆಗಿಲ್ಲದಿರುವ ಕುರಿತು ಪ್ರಸ್ತಾಪಿಸಿ,ಮಾತಾಡುವಂತಹ ಕೆಲಸಗಳನ್ನು ಈ ಸರ್ಕಾರ ಮಾಡಿಯೇ ಇಲ್ಲ. ಇನ್ನು ಆರು ತಿಂಗಳ<br />ಸಮಯ ಕೊಡಿ ಅಂತ ಮುಖ್ಯಮಂತ್ರಿ ಯಡಿಯೂರಪ್ಪ ಕೇಳಿದ್ದಾರೆ. ಆರು ತಿಂಗಳು ಆದ ಮೇಲೆ ಜನ ಬಡಿಗೆ ತಗೊಂಡು ವಿಪಕ್ಷಕ್ಕೆ ಹೊಡೆಯುತ್ತಾರೆ ಅಂತ ಸಿಎಂ ಹೇಳಿದ್ದಾರೆ. ಆರು ತಿಂಗಳು ಸಮಯ ಕೊಟ್ಟೇ ನೋಡ್ತೀವಿ,ಅದೇನು ಸಾಧನೆ ಮಾಡ್ತಾರೋ ಮಾಡಲಿ’ ಎಂದರು.</p>.<p class="Subhead">ಪ್ರಧಾನಿಗೆ ಆಹ್ವಾನ: ನಿಖಿಲ್ ಮದುವೆ ಸಿದ್ಧತೆ ನಡೆದಿದೆ. ಏಪ್ರಿಲ್ 17ರಂದು ಮದುವೆ ನಡೆಯಲಿದೆ. ಲಗ್ನ ಪತ್ರಿಕೆ ಹಂಚುವುದಕ್ಕೆ ಇನ್ನೂ ಆರಂಭಿಸಿಲ್ಲ ಎಂದು ಹೇಳಿದ ಅವರು, ಪ್ರಧಾನಿ ನರೇಂದ್ರ ಮೋದಿಸಹಿತ ಎಲ್ಲ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>‘ಪ್ರಶಾಂತ್ ಜತೆಗೆ ಮೊದಲ ಸುತ್ತಿನ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಅವರು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಸರ್ಕಾರ ಟೇಕ್ ಆಫ್ ಆಗಿಲ್ಲದಿರುವ ಕುರಿತು ಪ್ರಸ್ತಾಪಿಸಿ,ಮಾತಾಡುವಂತಹ ಕೆಲಸಗಳನ್ನು ಈ ಸರ್ಕಾರ ಮಾಡಿಯೇ ಇಲ್ಲ. ಇನ್ನು ಆರು ತಿಂಗಳ<br />ಸಮಯ ಕೊಡಿ ಅಂತ ಮುಖ್ಯಮಂತ್ರಿ ಯಡಿಯೂರಪ್ಪ ಕೇಳಿದ್ದಾರೆ. ಆರು ತಿಂಗಳು ಆದ ಮೇಲೆ ಜನ ಬಡಿಗೆ ತಗೊಂಡು ವಿಪಕ್ಷಕ್ಕೆ ಹೊಡೆಯುತ್ತಾರೆ ಅಂತ ಸಿಎಂ ಹೇಳಿದ್ದಾರೆ. ಆರು ತಿಂಗಳು ಸಮಯ ಕೊಟ್ಟೇ ನೋಡ್ತೀವಿ,ಅದೇನು ಸಾಧನೆ ಮಾಡ್ತಾರೋ ಮಾಡಲಿ’ ಎಂದರು.</p>.<p class="Subhead">ಪ್ರಧಾನಿಗೆ ಆಹ್ವಾನ: ನಿಖಿಲ್ ಮದುವೆ ಸಿದ್ಧತೆ ನಡೆದಿದೆ. ಏಪ್ರಿಲ್ 17ರಂದು ಮದುವೆ ನಡೆಯಲಿದೆ. ಲಗ್ನ ಪತ್ರಿಕೆ ಹಂಚುವುದಕ್ಕೆ ಇನ್ನೂ ಆರಂಭಿಸಿಲ್ಲ ಎಂದು ಹೇಳಿದ ಅವರು, ಪ್ರಧಾನಿ ನರೇಂದ್ರ ಮೋದಿಸಹಿತ ಎಲ್ಲ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>