'ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದ ಬಡವರು, ಶ್ರಮಿಕರಿಗಾಗಿ ಸರ್ಕಾರ ಪಡಿತರ ಹಾಗೂ ನೆರವು ನೀಡಿದೆ. ಆಟೊ, ಟ್ಯಾಕ್ಸಿ ಚಾಲಕರು, ನೇಕಾರರು, ಸವಿತಾ ಸಮಾಜ ಸೇರಿ ಹಲವಾರು ಸಮುದಾಯಗಳಿಗೆ ಪರಿಹಾರ ಘೋಷಿಸಿದೆ. ಅದೇ ರೀತಿ ಕಲಾವಿದರೂ ಸಂಕಷ್ಟದಲ್ಲಿದ್ದಾರೆ. ಜನಪದ, ರಂಗಭೂಮಿ, ಶಾಸ್ತ್ರೀಯ ಸಂಗೀತ, ನೃತ್ಯ ಕಲಾವಿದರ ಜೀವನ ನಿರ್ವಹಣೆ ಕಷ್ಟವಾಗಿದೆ. ಅವರಿಗೂ ಸರ್ಕಾರ ₹20 ಕೋಟಿ ನೆರವು ಘೋಷಿಸಬೇಕು' ಎಂದು ಆಗ್ರಹಿಸಿದರು.