<p><strong>ಬೆಂಗಳೂರು</strong>: ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಸರ್ಕಾರ ನೆರವು ನೀಡಬೇಕು ಎಂದು ಒತ್ತಾಯಿಸಿ ಜೆಡಿಯು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>'ಖಾಸಗಿ ಶಾಲೆಗಳ 35 ಸಾವಿರ ಶಿಕ್ಷಕರು ಹಾಗೂ ಉಪನ್ಯಾಸಕರು ಮೂರು ತಿಂಗಳಿನಿಂದ ವೇತನವಿಲ್ಲದೇ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಎಂಟು ಮಂದಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕ್ಷಕ ಸಮೂಹ ಶೋಚನೀಯ ಸ್ಥಿತಿ ತಲುಪಿದೆ. ಶಿಕ್ಷಕರಿಗಾಗಿ ₹50 ಕೋಟಿ ನೆರವು ಘೋಷಿಸಬೇಕು' ಎಂದು ಮಹಿಮ ಪಟೇಲ್ ಮನವಿ ಮಾಡಿದರು.</p>.<p>'ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದ ಬಡವರು, ಶ್ರಮಿಕರಿಗಾಗಿ ಸರ್ಕಾರ ಪಡಿತರ ಹಾಗೂ ನೆರವು ನೀಡಿದೆ. ಆಟೊ, ಟ್ಯಾಕ್ಸಿ ಚಾಲಕರು, ನೇಕಾರರು, ಸವಿತಾ ಸಮಾಜ ಸೇರಿ ಹಲವಾರು ಸಮುದಾಯಗಳಿಗೆ ಪರಿಹಾರ ಘೋಷಿಸಿದೆ. ಅದೇ ರೀತಿ ಕಲಾವಿದರೂ ಸಂಕಷ್ಟದಲ್ಲಿದ್ದಾರೆ. ಜನಪದ, ರಂಗಭೂಮಿ, ಶಾಸ್ತ್ರೀಯ ಸಂಗೀತ, ನೃತ್ಯ ಕಲಾವಿದರ ಜೀವನ ನಿರ್ವಹಣೆ ಕಷ್ಟವಾಗಿದೆ. ಅವರಿಗೂ ಸರ್ಕಾರ ₹20 ಕೋಟಿ ನೆರವು ಘೋಷಿಸಬೇಕು' ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಸರ್ಕಾರ ನೆರವು ನೀಡಬೇಕು ಎಂದು ಒತ್ತಾಯಿಸಿ ಜೆಡಿಯು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>'ಖಾಸಗಿ ಶಾಲೆಗಳ 35 ಸಾವಿರ ಶಿಕ್ಷಕರು ಹಾಗೂ ಉಪನ್ಯಾಸಕರು ಮೂರು ತಿಂಗಳಿನಿಂದ ವೇತನವಿಲ್ಲದೇ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಎಂಟು ಮಂದಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕ್ಷಕ ಸಮೂಹ ಶೋಚನೀಯ ಸ್ಥಿತಿ ತಲುಪಿದೆ. ಶಿಕ್ಷಕರಿಗಾಗಿ ₹50 ಕೋಟಿ ನೆರವು ಘೋಷಿಸಬೇಕು' ಎಂದು ಮಹಿಮ ಪಟೇಲ್ ಮನವಿ ಮಾಡಿದರು.</p>.<p>'ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದ ಬಡವರು, ಶ್ರಮಿಕರಿಗಾಗಿ ಸರ್ಕಾರ ಪಡಿತರ ಹಾಗೂ ನೆರವು ನೀಡಿದೆ. ಆಟೊ, ಟ್ಯಾಕ್ಸಿ ಚಾಲಕರು, ನೇಕಾರರು, ಸವಿತಾ ಸಮಾಜ ಸೇರಿ ಹಲವಾರು ಸಮುದಾಯಗಳಿಗೆ ಪರಿಹಾರ ಘೋಷಿಸಿದೆ. ಅದೇ ರೀತಿ ಕಲಾವಿದರೂ ಸಂಕಷ್ಟದಲ್ಲಿದ್ದಾರೆ. ಜನಪದ, ರಂಗಭೂಮಿ, ಶಾಸ್ತ್ರೀಯ ಸಂಗೀತ, ನೃತ್ಯ ಕಲಾವಿದರ ಜೀವನ ನಿರ್ವಹಣೆ ಕಷ್ಟವಾಗಿದೆ. ಅವರಿಗೂ ಸರ್ಕಾರ ₹20 ಕೋಟಿ ನೆರವು ಘೋಷಿಸಬೇಕು' ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>