<p><strong>ಬೆಂಗಳೂರು</strong>: ಚಿನ್ನಾಭರಣ ಅಂಗಡಿ ಮಾಲೀಕರು ನೀಡಿದ್ದ ಚಿನ್ನದಗಟ್ಟಿಯನ್ನು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರಾಜಸ್ಥಾನದ ಮನೀಶ್ ಕುಮಾರ್ ಸೋನಿ(40) ಬಂಧಿತ ಆರೋಪಿ.</p>.<p>ಆರೋಪಿಯಿಂದ ₹ 2.50 ಕೋಟಿ ಮೌಲ್ಯದ 3 ಕೆ.ಜಿ. 166 ಗ್ರಾಂ ತೂಕದ ಚಿನ್ನದ ಗಟ್ಟಿ ಮತ್ತು ₹ 8.53 ಲಕ್ಷ ನಗದು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು.</p>.<p>‘ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಸೋನಿ ಹನುಮಂತನಗರದಲ್ಲಿ ವಾಸವಾಗಿದ್ದ. ನಾಲ್ಕು ವರ್ಷಗಳಿಂದ ಜಯನಗರ ಮೂರನೇ ಬ್ಲಾಕ್ನ ಚಿನ್ನಾಭರಣ ಅಂಗಡಿಯಿಂದ ಚಿನ್ನದಗಟ್ಟಿ ಪಡೆದು, ವಿವಿಧ ಶೈಲಿಯ ಚಿನ್ನಾಭರಣ ತಯಾರಿಸಿಕೊಡುತ್ತಿದ್ದ. ಏಪ್ರಿಲ್ನಿಂದ ಜೂನ್ವರೆಗೆ ಪಡೆದುಕೊಂಡಿದ್ದ 8 ಕೆ.ಜಿ 351 ಗ್ರಾಂ ಚಿನ್ನದ ಗಟ್ಟಿಯಲ್ಲಿ ಆಭರಣವನ್ನೂ ತಯಾರಿಸಿಕೊಡದೆ, ಸಂಪರ್ಕಕ್ಕೂ ಸಿಗದೆ ಪರಾರಿಯಾಗಿದ್ದ. ಈ ಸಂಬಂಧ ಆರೋಪಿಯ ವಿರುದ್ಧ ದೂರು ನೀಡಲಾಗಿತ್ತು. ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಹೇಳಿದರು.</p>.<p>ಗೋವಾದಲ್ಲಿ ಬಂಧನ: ಆರೋಪಿ ಗೋವಾಕ್ಕೆ ಪರಾರಿ ಆಗಿರುವ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ.</p>.<p>ಆರೋಪಿ ಜೀವನ ನಿರ್ವಹಣೆ ಹಾಗೂ ಇತರೆ ಅಗತ್ಯಗಳಿಗೆ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಆ ಸಾಲ ತೀರಿಸಲು ಸಾಧ್ಯವಾಗದೆ ಚಿನ್ನದಗಟ್ಟಿ ಕಳ್ಳತನ ಮಾಡಿದ್ದ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿನ್ನಾಭರಣ ಅಂಗಡಿ ಮಾಲೀಕರು ನೀಡಿದ್ದ ಚಿನ್ನದಗಟ್ಟಿಯನ್ನು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರಾಜಸ್ಥಾನದ ಮನೀಶ್ ಕುಮಾರ್ ಸೋನಿ(40) ಬಂಧಿತ ಆರೋಪಿ.</p>.<p>ಆರೋಪಿಯಿಂದ ₹ 2.50 ಕೋಟಿ ಮೌಲ್ಯದ 3 ಕೆ.ಜಿ. 166 ಗ್ರಾಂ ತೂಕದ ಚಿನ್ನದ ಗಟ್ಟಿ ಮತ್ತು ₹ 8.53 ಲಕ್ಷ ನಗದು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು.</p>.<p>‘ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿದ್ದ ಮನೀಶ್ ಕುಮಾರ್ ಸೋನಿ ಹನುಮಂತನಗರದಲ್ಲಿ ವಾಸವಾಗಿದ್ದ. ನಾಲ್ಕು ವರ್ಷಗಳಿಂದ ಜಯನಗರ ಮೂರನೇ ಬ್ಲಾಕ್ನ ಚಿನ್ನಾಭರಣ ಅಂಗಡಿಯಿಂದ ಚಿನ್ನದಗಟ್ಟಿ ಪಡೆದು, ವಿವಿಧ ಶೈಲಿಯ ಚಿನ್ನಾಭರಣ ತಯಾರಿಸಿಕೊಡುತ್ತಿದ್ದ. ಏಪ್ರಿಲ್ನಿಂದ ಜೂನ್ವರೆಗೆ ಪಡೆದುಕೊಂಡಿದ್ದ 8 ಕೆ.ಜಿ 351 ಗ್ರಾಂ ಚಿನ್ನದ ಗಟ್ಟಿಯಲ್ಲಿ ಆಭರಣವನ್ನೂ ತಯಾರಿಸಿಕೊಡದೆ, ಸಂಪರ್ಕಕ್ಕೂ ಸಿಗದೆ ಪರಾರಿಯಾಗಿದ್ದ. ಈ ಸಂಬಂಧ ಆರೋಪಿಯ ವಿರುದ್ಧ ದೂರು ನೀಡಲಾಗಿತ್ತು. ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಹೇಳಿದರು.</p>.<p>ಗೋವಾದಲ್ಲಿ ಬಂಧನ: ಆರೋಪಿ ಗೋವಾಕ್ಕೆ ಪರಾರಿ ಆಗಿರುವ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ.</p>.<p>ಆರೋಪಿ ಜೀವನ ನಿರ್ವಹಣೆ ಹಾಗೂ ಇತರೆ ಅಗತ್ಯಗಳಿಗೆ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಆ ಸಾಲ ತೀರಿಸಲು ಸಾಧ್ಯವಾಗದೆ ಚಿನ್ನದಗಟ್ಟಿ ಕಳ್ಳತನ ಮಾಡಿದ್ದ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>