<p><strong>ಬೆಂಗಳೂರು:</strong> ಜಗಜೀವನರಾಮ್ ನಗರ ಠಾಣೆ ವ್ಯಾಪ್ತಿಯಲ್ಲಿ ಚಂದ್ರಶೇಖರ್ (19) ಎಂಬುವರನ್ನು ಕೊಲೆ ಮಾಡಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>‘ಹಳೇ ಗುಡ್ಡದಹಳ್ಳಿಯ ಶಾಹೀದ್ ಪಾಷಾ (21), ಹೊಸಕೋಟೆಯ ಶಾಹೀದ್ ಅಲಿಯಾಸ್ ಗೋಲಿ (22) ಬಂಧಿತರು. ಇನ್ನೊಬ್ಬ ಆರೋಪಿ, 17 ವರ್ಷದ ಬಾಲಕ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಐಟಿಐ ಫಿಟ್ಟರ್’ ಕೋರ್ಸ್ ಮುಗಿಸಿದ್ದ ಚಂದ್ರಶೇಖರ್, ನಗರದ ರೈಲ್ವೆ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ (ಏಪ್ರಿಲ್ 4) ರಾತ್ರಿ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸ್ನೇಹಿತರು ನೀಡಿದ್ದ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<p class="Subhead">ಸ್ನೇಹಿತನ ಹುಟ್ಟುಹಬ್ಬ: ‘ಸ್ನೇಹಿತ ಸೈಮನ್ ಎಂಬುವರ ಹುಟ್ಟಹಬ್ಬ ಆಚರಣೆಗೆಂದು ಚಂದ್ರಶೇಖರ್ ಹಾಗೂ ಇತರರು, ಛಲವಾದಿ ಪಾಳ್ಯದಲ್ಲಿರುವ ಕೊಠಡಿಯೊಂದರಲ್ಲಿ ಸೇರಿದ್ದರು. ಕೇಕ್ ಕತ್ತರಿಸಿ ತಡರಾತ್ರಿಯವರೆಗೂ ಸಂಭ್ರಮಿಸಿದ್ದರು’ ಎಂದು ಅಧಿಕಾರಿ ತಿಳಿಸಿದರು.</p>.<p>‘ಸ್ನೇಹಿತರೆಲ್ಲರೂ ತಡರಾತ್ರಿ ಊಟಕ್ಕೆಂದು ಕೊಠಡಿಯಿಂದ ಹೊರಗೆ ಬಂದಿದ್ದರು. ಆದರೆ, ಎಲ್ಲಿಯೂ ಹೋಟೆಲ್ಗಳು ತೆರೆದಿರಲಿಲ್ಲ. ರಂಜಾನ್ ಉಪವಾಸ ಆರಂಭವಾಗಿರುವುದರಿಂದ ಜಗಜೀವನ್ರಾಮ್ ನಗರದಲ್ಲಿ ಏನಾದರೂ ತಿನ್ನಲು ಸಿಗಬಹುದೆಂದು ಚಂದ್ರಶೇಖರ್ ಹಾಗೂ ಸೈಮನ್ ಬೈಕ್ನಲ್ಲಿ ಬಂದಿದ್ದರು.’</p>.<p>‘ಚಂದ್ರಶೇಖರ್ ಚಲಾಯಿಸುತ್ತಿದ್ದ ಬೈಕ್, ಹಳೇ ಗುಡ್ಡದಹಳ್ಳಿಯಲ್ಲಿ ಮತ್ತೊಂದು ಬೈಕ್ಗೆ ಗುದ್ದಿತ್ತು. ಆ ಬೈಕ್ ಚಾಲಕನಾಗಿದ್ದ ಆರೋಪಿ ಹಾಗೂ ಇತರರು, ಗಲಾಟೆ ಆರಂಭಿಸಿದ್ದರು. ಚಂದ್ರಶೇಖರ್ ಅವರನ್ನು ಹಿಡಿದು ರಸ್ತೆಯಲ್ಲಿ ಎಳೆದಾಡಿ ಹೊಡೆದಿದ್ದರು. ಬಿಡಿಸಲು ಹೋದ ಸ್ನೇಹಿತ ಸೈಮನ್ ಮೇಲೂ ಹಲ್ಲೆ ಮಾಡಿದ್ದರು.’</p>.<p>’ಚಂದ್ರಶೇಖರ್ ಅವರನ್ನು ಸುತ್ತುವರೆದು ಥಳಿಸಿದ್ದ ಆರೋಪಿಗಳು, ದೇಹದ ಹಲವೆಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ತೀವ್ರ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಆಟೊದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದೂ ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಗಜೀವನರಾಮ್ ನಗರ ಠಾಣೆ ವ್ಯಾಪ್ತಿಯಲ್ಲಿ ಚಂದ್ರಶೇಖರ್ (19) ಎಂಬುವರನ್ನು ಕೊಲೆ ಮಾಡಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>‘ಹಳೇ ಗುಡ್ಡದಹಳ್ಳಿಯ ಶಾಹೀದ್ ಪಾಷಾ (21), ಹೊಸಕೋಟೆಯ ಶಾಹೀದ್ ಅಲಿಯಾಸ್ ಗೋಲಿ (22) ಬಂಧಿತರು. ಇನ್ನೊಬ್ಬ ಆರೋಪಿ, 17 ವರ್ಷದ ಬಾಲಕ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಐಟಿಐ ಫಿಟ್ಟರ್’ ಕೋರ್ಸ್ ಮುಗಿಸಿದ್ದ ಚಂದ್ರಶೇಖರ್, ನಗರದ ರೈಲ್ವೆ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ (ಏಪ್ರಿಲ್ 4) ರಾತ್ರಿ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸ್ನೇಹಿತರು ನೀಡಿದ್ದ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<p class="Subhead">ಸ್ನೇಹಿತನ ಹುಟ್ಟುಹಬ್ಬ: ‘ಸ್ನೇಹಿತ ಸೈಮನ್ ಎಂಬುವರ ಹುಟ್ಟಹಬ್ಬ ಆಚರಣೆಗೆಂದು ಚಂದ್ರಶೇಖರ್ ಹಾಗೂ ಇತರರು, ಛಲವಾದಿ ಪಾಳ್ಯದಲ್ಲಿರುವ ಕೊಠಡಿಯೊಂದರಲ್ಲಿ ಸೇರಿದ್ದರು. ಕೇಕ್ ಕತ್ತರಿಸಿ ತಡರಾತ್ರಿಯವರೆಗೂ ಸಂಭ್ರಮಿಸಿದ್ದರು’ ಎಂದು ಅಧಿಕಾರಿ ತಿಳಿಸಿದರು.</p>.<p>‘ಸ್ನೇಹಿತರೆಲ್ಲರೂ ತಡರಾತ್ರಿ ಊಟಕ್ಕೆಂದು ಕೊಠಡಿಯಿಂದ ಹೊರಗೆ ಬಂದಿದ್ದರು. ಆದರೆ, ಎಲ್ಲಿಯೂ ಹೋಟೆಲ್ಗಳು ತೆರೆದಿರಲಿಲ್ಲ. ರಂಜಾನ್ ಉಪವಾಸ ಆರಂಭವಾಗಿರುವುದರಿಂದ ಜಗಜೀವನ್ರಾಮ್ ನಗರದಲ್ಲಿ ಏನಾದರೂ ತಿನ್ನಲು ಸಿಗಬಹುದೆಂದು ಚಂದ್ರಶೇಖರ್ ಹಾಗೂ ಸೈಮನ್ ಬೈಕ್ನಲ್ಲಿ ಬಂದಿದ್ದರು.’</p>.<p>‘ಚಂದ್ರಶೇಖರ್ ಚಲಾಯಿಸುತ್ತಿದ್ದ ಬೈಕ್, ಹಳೇ ಗುಡ್ಡದಹಳ್ಳಿಯಲ್ಲಿ ಮತ್ತೊಂದು ಬೈಕ್ಗೆ ಗುದ್ದಿತ್ತು. ಆ ಬೈಕ್ ಚಾಲಕನಾಗಿದ್ದ ಆರೋಪಿ ಹಾಗೂ ಇತರರು, ಗಲಾಟೆ ಆರಂಭಿಸಿದ್ದರು. ಚಂದ್ರಶೇಖರ್ ಅವರನ್ನು ಹಿಡಿದು ರಸ್ತೆಯಲ್ಲಿ ಎಳೆದಾಡಿ ಹೊಡೆದಿದ್ದರು. ಬಿಡಿಸಲು ಹೋದ ಸ್ನೇಹಿತ ಸೈಮನ್ ಮೇಲೂ ಹಲ್ಲೆ ಮಾಡಿದ್ದರು.’</p>.<p>’ಚಂದ್ರಶೇಖರ್ ಅವರನ್ನು ಸುತ್ತುವರೆದು ಥಳಿಸಿದ್ದ ಆರೋಪಿಗಳು, ದೇಹದ ಹಲವೆಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ತೀವ್ರ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಆಟೊದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದೂ ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>