<p><strong>ರಾಜರಾಜೇಶ್ವರಿನಗರ:</strong> ಬೆಂಗಳೂರು ವಿಶ್ವವಿದ್ಯಾಲಯದ ವಸತಿಗೃಹ ಸಮೀಪವಿರುವ ಹೊರವರ್ತುಲ ರಸ್ತೆಯ ಸುತ್ತಮುತ್ತ ಅಡುಗೆ ತ್ಯಾಜ್ಯವನ್ನು ಪ್ಲಾಸ್ಟಿಕ್ ಚೀಲದಲ್ಲಿ ತಂದು ಬಿಸಾಡುತ್ತಿದ್ದಾರೆ. ಇದರಿಂದ ಇಡೀ ಪ್ರದೇಶವೇ ದುರ್ನಾತ ಬೀರುತ್ತಿರುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಜಾನುವಾರುಗಳು ಅಡುಗೆ ತ್ಯಾಜ್ಯದ ಜೊತೆಗೆ, ಪ್ಲಾಸ್ಟಿಕ್ ಚೀಲವನ್ನೂ ತಿನ್ನುವುದರಿಂದ ಅವುಗಳ ಹೊಟ್ಟೆಗೆ ಪ್ಲಾಸ್ಟಿಕ್ ಸೇರುತ್ತಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ವರ್ತುಲ ರಸ್ತೆ, ಜ್ಞಾನಗಂಗಾನಗರ, ಶ್ರೀಗಂಧದ ಕಾವಲು, ಉಲ್ಲಾಳು ಮುಖ್ಯರಸ್ತೆ, ದೊಡ್ಡಗೊಲ್ಲರಹಟ್ಟಿ ಸುತ್ತಮುತ್ತಲಿನ ಪ್ರದೇಶದಲ್ಲೂ ಹೀಗೆ ಪ್ಲಾಸ್ಟಿಕ್ ಚೀಲದಲ್ಲಿ ಆಹಾರ ತ್ಯಾಜ್ಯವನ್ನು ತುಂಬಿ ಎಸೆಯಲಾಗುತ್ತಿದೆ.</p>.<p>‘ಬಿಬಿಎಂಪಿ ಘನ ತ್ಯಾಜ್ಯ ವಿಭಾಗದವರು ನಾಲ್ಕೈದು ದಿನಕ್ಕೊಮ್ಮೆ ಕಸವನ್ನು ಸಂಗ್ರಹಿಸುತ್ತಾರೆ. ಅಷ್ಟರಲ್ಲೇ ಬೀದಿ ನಾಯಿಗಳು ಗುಂಪು ಗುಂಪಾಗಿ ಬಂದು ಈ ತ್ಯಾಜ್ಯವನ್ನು ಎಳೆದಾಡುತ್ತವೆ. ಈ ರಸ್ತೆಯಲ್ಲಿ ಓಡಾಡುವ ಮಕ್ಕಳು, ವೃದ್ದರು, ಪಾದಚಾರಿಗಳ ಮೇಲೆ ದಾಳಿ ಮಾಡುತ್ತಿವೆ’ ಎಂದು ಸ್ಥಳೀಯ ನಿವಾಸಿಗಳಾದ ರಾಮಕೃಷ್ಣ, ಕೃಷ್ಣೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ವಸತಿಗೃಹವಿರುವ ರಸ್ತೆಯಲ್ಲೇ ಚೈತನ್ಯ, ವಿಶ್ವಪರಿಶ್ರಮ ಪಿವಿಪಿ ಶಾಲೆಗಳಿವೆ. ತ್ಯಾಜ್ಯದ ದುರ್ವಾಸನೆ, ನಾಯಿಗಳ ಹಾವಳಿಯಿಂದಾಗಿ ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಶಾಲೆಗೆ ಹೋಗಲು ಹೆದರುತ್ತಾರೆ ಎಂದು ಪೋಷಕರು ಹೇಳುತ್ತಾರೆ.</p>.<p>‘ಈ ರಸ್ತೆ ಬದಿಯಲ್ಲಿ ತಾಜ್ಯ ಸುರಿಯುವುದನ್ನು ನಿಯಂತ್ರಿಸಬೇಕು. ಈಗಾಗಲೇ ರಾಶಿ ಹಾಕಿರುವ ತ್ಯಾಜ್ಯವನ್ನು ತಕ್ಷಣವೇ ವಿಲೇವಾರಿ ಮಾಡಬೇಕು’ ಎಂದು ಸ್ಥಳೀಯ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ಬೆಂಗಳೂರು ವಿಶ್ವವಿದ್ಯಾಲಯದ ವಸತಿಗೃಹ ಸಮೀಪವಿರುವ ಹೊರವರ್ತುಲ ರಸ್ತೆಯ ಸುತ್ತಮುತ್ತ ಅಡುಗೆ ತ್ಯಾಜ್ಯವನ್ನು ಪ್ಲಾಸ್ಟಿಕ್ ಚೀಲದಲ್ಲಿ ತಂದು ಬಿಸಾಡುತ್ತಿದ್ದಾರೆ. ಇದರಿಂದ ಇಡೀ ಪ್ರದೇಶವೇ ದುರ್ನಾತ ಬೀರುತ್ತಿರುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಜಾನುವಾರುಗಳು ಅಡುಗೆ ತ್ಯಾಜ್ಯದ ಜೊತೆಗೆ, ಪ್ಲಾಸ್ಟಿಕ್ ಚೀಲವನ್ನೂ ತಿನ್ನುವುದರಿಂದ ಅವುಗಳ ಹೊಟ್ಟೆಗೆ ಪ್ಲಾಸ್ಟಿಕ್ ಸೇರುತ್ತಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ವರ್ತುಲ ರಸ್ತೆ, ಜ್ಞಾನಗಂಗಾನಗರ, ಶ್ರೀಗಂಧದ ಕಾವಲು, ಉಲ್ಲಾಳು ಮುಖ್ಯರಸ್ತೆ, ದೊಡ್ಡಗೊಲ್ಲರಹಟ್ಟಿ ಸುತ್ತಮುತ್ತಲಿನ ಪ್ರದೇಶದಲ್ಲೂ ಹೀಗೆ ಪ್ಲಾಸ್ಟಿಕ್ ಚೀಲದಲ್ಲಿ ಆಹಾರ ತ್ಯಾಜ್ಯವನ್ನು ತುಂಬಿ ಎಸೆಯಲಾಗುತ್ತಿದೆ.</p>.<p>‘ಬಿಬಿಎಂಪಿ ಘನ ತ್ಯಾಜ್ಯ ವಿಭಾಗದವರು ನಾಲ್ಕೈದು ದಿನಕ್ಕೊಮ್ಮೆ ಕಸವನ್ನು ಸಂಗ್ರಹಿಸುತ್ತಾರೆ. ಅಷ್ಟರಲ್ಲೇ ಬೀದಿ ನಾಯಿಗಳು ಗುಂಪು ಗುಂಪಾಗಿ ಬಂದು ಈ ತ್ಯಾಜ್ಯವನ್ನು ಎಳೆದಾಡುತ್ತವೆ. ಈ ರಸ್ತೆಯಲ್ಲಿ ಓಡಾಡುವ ಮಕ್ಕಳು, ವೃದ್ದರು, ಪಾದಚಾರಿಗಳ ಮೇಲೆ ದಾಳಿ ಮಾಡುತ್ತಿವೆ’ ಎಂದು ಸ್ಥಳೀಯ ನಿವಾಸಿಗಳಾದ ರಾಮಕೃಷ್ಣ, ಕೃಷ್ಣೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ವಸತಿಗೃಹವಿರುವ ರಸ್ತೆಯಲ್ಲೇ ಚೈತನ್ಯ, ವಿಶ್ವಪರಿಶ್ರಮ ಪಿವಿಪಿ ಶಾಲೆಗಳಿವೆ. ತ್ಯಾಜ್ಯದ ದುರ್ವಾಸನೆ, ನಾಯಿಗಳ ಹಾವಳಿಯಿಂದಾಗಿ ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಶಾಲೆಗೆ ಹೋಗಲು ಹೆದರುತ್ತಾರೆ ಎಂದು ಪೋಷಕರು ಹೇಳುತ್ತಾರೆ.</p>.<p>‘ಈ ರಸ್ತೆ ಬದಿಯಲ್ಲಿ ತಾಜ್ಯ ಸುರಿಯುವುದನ್ನು ನಿಯಂತ್ರಿಸಬೇಕು. ಈಗಾಗಲೇ ರಾಶಿ ಹಾಕಿರುವ ತ್ಯಾಜ್ಯವನ್ನು ತಕ್ಷಣವೇ ವಿಲೇವಾರಿ ಮಾಡಬೇಕು’ ಎಂದು ಸ್ಥಳೀಯ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>