ಇದಕ್ಕೆ ಧ್ವನಿಗೂಡಿಸಿದ ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಎಲ್.ಹನುಮಂತಯ್ಯ, ‘ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಅಂಕಿ–ಅಂಶ ಬಿಡುಗಡೆ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ. ದೌರ್ಜನ್ಯ ನಡೆಸಿದವರಿಗೆ ಜಾಮೀನು ನೀಡಬಾರದು ಎಂದು ಕಾಯ್ದೆಯಲ್ಲಿದ್ದರೂ, ನ್ಯಾಯಾಲಯಗಳು ಜಾಮೀನು ನೀಡುತ್ತಿವೆ. ಆರೋಪಿಗಳನ್ನು ಬಂಧಿಸುವ ಬದಲು ಪೊಲೀಸರೇ ಜಾಮೀನು ಪಡೆದು ಬರುವಂತೆ ವಾಪಸ್ ಕಳುಹಿಸುತ್ತಾರೆ. ಹೀಗಾಗಿಯೇ ದೌರ್ಜನ್ಯಗಳು ಇನ್ನೂ ನಿಂತಿಲ್ಲ’ ಎಂದರು.