<p><strong>ಬೆಂಗಳೂರು:</strong> ‘ಬೆಂಗಳೂರು ವಿಶ್ವವಿದ್ಯಾಲಯದ ಆವರಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು. ಪ್ಲಾಸ್ಟಿಕ್ ಮರುಬಳಕೆಗೆ ಕಾಳಜಿವಹಿಸಬೇಕು’ ಎಂದು ಬಿಸ್ಲೆರಿ ಇಂಟರ್ನ್ಯಾಷನಲ್ ಸಂಸ್ಥೆಯ ಕರ್ನಾಟಕ ವಿಭಾಗದ ಸಿಎಸ್ಆರ್ ಎಕ್ಸಿಕ್ಯೂಟಿವ್ ಸೂರಜ್ಕುಮಾರ್ ಮನವಿ ಮಾಡಿದರು.<br><br> ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಶುಕ್ರವಾರ ಆಯೋಜಿಸಿದ್ದ 'ಪ್ಲಾಸ್ಟಿಕ್ ಮರುಬಳಕೆ ತರಬೇತಿ ಅಭಿಯಾನ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಜ್ಞಾನಭಾರತಿ ಆವರಣವನ್ನು ಪ್ಲಾಸ್ಟಿಕ್ ಹಾಗೂ ಕಸ ಮುಕ್ತವಾಗಿಸಲು ಬೆಂಗಳೂರು ವಿಶ್ವವಿದ್ಯಾಲಯ, ಬಿಸ್ಲೆರಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ಭಾಗವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>‘ಪ್ಲಾಸ್ಟಿಕ್ ಮರುಬಳಕೆಗೆ ಪ್ರಯತ್ನಿಸಬೇಕು. ಮನೆಯಲ್ಲಿಯೂ ಕಸವನ್ನು ವಿಂಗಡಿಸಿ ಪೌರ ಕಾರ್ಮಿಕರಿಗೆ ನೀಡಬೇಕು. ಬಾಟಲ್ ಫಾರ್ ಚೇಂಜ್ ಎಂಬ ಆ್ಯಪ್ ಮೂಲಕ ನೀರಿನ ಬಾಟಲ್ಗಳನ್ನು ಮರುಬಳಕೆಗೆ ನೀಡಬಹುದು’ ಎಂದು ಸಲಹೆ ನೀಡಿದರು.</p>.<p>‘ವಿಶ್ವವಿದ್ಯಾಲಯದ ಪ್ರಮುಖ ಸ್ಥಳಗಳು, ಶೈಕ್ಷಣಿಕ ವಿಭಾಗ, ಆಡಳಿತ ಕಟ್ಟಡ, ವಿದ್ಯಾರ್ಥಿ ನಿಲಯಗಳ ಹೊರಗೆ ಕಸದ ಬುಟ್ಟಿ ಅಳವಡಿಸಲಾಗುತ್ತದೆ. ಜ್ಞಾನಭಾರತಿ ಆವರಣದಲ್ಲಿ ಏಳು ವಿಧದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸ್ಲೆರಿ ಸಂಸ್ಥೆಯ ವತಿಯಿಂದ ನಿರಂತರವಾಗಿ ಸಂಗ್ರಹಿಸಿ ಮರುಬಳಕೆ ಮಾಡಲಾಗುವುದು’ ಎಂದು ಭವಿಷ್ಯದ ಯೋಜನೆಯನ್ನು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಬಿ.ಸಿ.ನಾಗರಾಜ, ಡೀನ್ ಪ್ರೊ.ಅಶೋಕ್ ಡಿ. ಹಂಜಗಿ, ಪ್ರಾಧ್ಯಾಪಕರಾದ ಪಿ.ಸಿ.ಕೃಷ್ಣಸ್ವಾಮಿ, ನಿರ್ಮಲ, ವಾಹಿನಿ, ಪುಟ್ಟಸ್ವಾಮಯ್ಯ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರು ವಿಶ್ವವಿದ್ಯಾಲಯದ ಆವರಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು. ಪ್ಲಾಸ್ಟಿಕ್ ಮರುಬಳಕೆಗೆ ಕಾಳಜಿವಹಿಸಬೇಕು’ ಎಂದು ಬಿಸ್ಲೆರಿ ಇಂಟರ್ನ್ಯಾಷನಲ್ ಸಂಸ್ಥೆಯ ಕರ್ನಾಟಕ ವಿಭಾಗದ ಸಿಎಸ್ಆರ್ ಎಕ್ಸಿಕ್ಯೂಟಿವ್ ಸೂರಜ್ಕುಮಾರ್ ಮನವಿ ಮಾಡಿದರು.<br><br> ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಶುಕ್ರವಾರ ಆಯೋಜಿಸಿದ್ದ 'ಪ್ಲಾಸ್ಟಿಕ್ ಮರುಬಳಕೆ ತರಬೇತಿ ಅಭಿಯಾನ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಜ್ಞಾನಭಾರತಿ ಆವರಣವನ್ನು ಪ್ಲಾಸ್ಟಿಕ್ ಹಾಗೂ ಕಸ ಮುಕ್ತವಾಗಿಸಲು ಬೆಂಗಳೂರು ವಿಶ್ವವಿದ್ಯಾಲಯ, ಬಿಸ್ಲೆರಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ಭಾಗವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>‘ಪ್ಲಾಸ್ಟಿಕ್ ಮರುಬಳಕೆಗೆ ಪ್ರಯತ್ನಿಸಬೇಕು. ಮನೆಯಲ್ಲಿಯೂ ಕಸವನ್ನು ವಿಂಗಡಿಸಿ ಪೌರ ಕಾರ್ಮಿಕರಿಗೆ ನೀಡಬೇಕು. ಬಾಟಲ್ ಫಾರ್ ಚೇಂಜ್ ಎಂಬ ಆ್ಯಪ್ ಮೂಲಕ ನೀರಿನ ಬಾಟಲ್ಗಳನ್ನು ಮರುಬಳಕೆಗೆ ನೀಡಬಹುದು’ ಎಂದು ಸಲಹೆ ನೀಡಿದರು.</p>.<p>‘ವಿಶ್ವವಿದ್ಯಾಲಯದ ಪ್ರಮುಖ ಸ್ಥಳಗಳು, ಶೈಕ್ಷಣಿಕ ವಿಭಾಗ, ಆಡಳಿತ ಕಟ್ಟಡ, ವಿದ್ಯಾರ್ಥಿ ನಿಲಯಗಳ ಹೊರಗೆ ಕಸದ ಬುಟ್ಟಿ ಅಳವಡಿಸಲಾಗುತ್ತದೆ. ಜ್ಞಾನಭಾರತಿ ಆವರಣದಲ್ಲಿ ಏಳು ವಿಧದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸ್ಲೆರಿ ಸಂಸ್ಥೆಯ ವತಿಯಿಂದ ನಿರಂತರವಾಗಿ ಸಂಗ್ರಹಿಸಿ ಮರುಬಳಕೆ ಮಾಡಲಾಗುವುದು’ ಎಂದು ಭವಿಷ್ಯದ ಯೋಜನೆಯನ್ನು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಬಿ.ಸಿ.ನಾಗರಾಜ, ಡೀನ್ ಪ್ರೊ.ಅಶೋಕ್ ಡಿ. ಹಂಜಗಿ, ಪ್ರಾಧ್ಯಾಪಕರಾದ ಪಿ.ಸಿ.ಕೃಷ್ಣಸ್ವಾಮಿ, ನಿರ್ಮಲ, ವಾಹಿನಿ, ಪುಟ್ಟಸ್ವಾಮಯ್ಯ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>