ಬೆಂಗಳೂರು: ಕೌಟುಂಬಿಕ ಕಲಹದಿಂದ ನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನಭಾರತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತ ಮಹಿಳೆಯ ಪತಿ ಮಂಜುನಾಥ್ ಎಂಬಾತನನ್ನು ಬಂಧಿಸಿದ್ದಾರೆ.
‘ಉಲ್ಲಾಳದ ನಿವಾಸಿ ಮಂಜುನಾಥ್, ರಂಜಿತಾ (26) ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇದೇ 19ರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿತ್ತು. ಮಕ್ಕಳೊಂದಿಗೆ ಕೊಠಡಿಯೊಳಗೆ ಹೋಗಿದ್ದ ರಂಜಿತಾ, ಇದೇ 20ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
‘ವರದಕ್ಷಿಣೆ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಮಹಿಳೆಯ ತಾಯಿ ದೂರು ನೀಡಿದ್ದರು.