ಕರ್ನಾಟಕ ಆರ್ಯ ವೈಶ್ಯ ಚಾರಿಟಬಲ್ ಟ್ರಸ್ಟ್ ನಗರದಲ್ಲಿ ಭಾನುವಾರ ಆಯೋಜಿಸಿದ್ದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.‘ತಂತ್ರಜ್ಞಾನ ಯುಗದಲ್ಲಿ ಕೌಶಲಗಳನ್ನು ಹೊಂದಿದ್ದರೆ ಮಾತ್ರ ಮುಂದಿನ ಹಾದಿಗಳು ಸುಗಮವಾಗಲಿದೆ. ಆದರೆ, ಇಂದಿನ ಮಕ್ಕಳು ಪಠ್ಯ ಶಿಕ್ಷಣಕ್ಕೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ. ಇದರಿಂದಾಗಿ ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ’ ಎಂದರು.