ಕೆಂಗೇರಿ: ‘ಉದ್ಯೋಗ ಸೃಷ್ಟಿ ವಿಷಯದಲ್ಲಿ ಸರ್ಕಾರ ಮಾತ್ರ ಜವಾಬ್ದಾರಿ ವಹಿಸಬೇಕು ಎಂದು ಬಯಸುವುದು ಸಲ್ಲದು. ಯುವಕರು ಸಹ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು. ಆಗ ಮಾತ್ರ ನಿರುದ್ಯೋಗ ಸಮಸ್ಯೆಗೆ ಇತಿಶ್ರೀ ಹಾಡಬಹುದು’ ಎಂದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲದಲ್ಲಿ ಗುರುವಾರ ಆಯೋಜಿಸಲಾಗಿದ್ದ 7 ಮತ್ತು 8ನೇವರ್ಷದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 116 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
‘ಪದವಿ ಎನ್ನುವುದು ಉದ್ಯೋಗ ಖಾತ್ರಿಯ ಪ್ರಮಾಣ ಪತ್ರವಲ್ಲ. ಕಾಲಘಟ್ಟಕ್ಕೆ ಪೂರಕವಾಗಿ ಕೌಶಲ ಬೆಳೆಸಿಕೊಳ್ಳಬೇಕು’ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
‘ದೇಶದಲ್ಲಿ ದಲಿತರ ಸ್ಥಿತಿ ಇಂದಿಗೂ ಶೋಚನೀಯವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಶಿಕ್ಷಣವು ಜ್ಞಾನಾರ್ಜನೆಗೆ ಮೀಸಲಾಗಬಾರದು. ಸಾಮಾಜಿಕ ಕಳಕಳಿ, ನೈತಿಕತೆ ಹಾಗೂ ಮೌಲ್ಯಗಳನ್ನು ಜಾಗೃತಗೊಳಿಸಬೇಕು’ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜ ಗಾಂಧಿ ಹೇಳಿದರು.