ಲಖನೌ: ಮದುವೆಯಾಗಿ ವಂಚಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಉತ್ತರಪ್ರದೇಶದ ಬದಾಯು ಪ್ರದೇಶದ ಯುವತಿಯೊಬ್ಬಳು ಬಿಜೆಪಿ ಶಾಸಕ ಕುಶಾಗ್ರ ಸಾಗರ್ ವಿರುದ್ಧ ದೂರು ದಾಖಲಿಸಿದ್ದಾರೆ.
ಕುಶಾಗ್ರ ಸಾಗರ್ ಉತ್ತರಪ್ರದೇಶ ಲಖನೌದ ಬಿಸೌಲಿ ವಿಧಾನಸಭಾ ಕ್ಷೇತ್ರದ ಶಾಸಕ. ಈತ ಮದುವೆಯಾಗುವುದಾಗಿ ನಂಬಿಸಿ ಸತತ ಎರಡು ವರ್ಷಗಳಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಕುಶಾಗ್ರ ಸಾಗರ್ ನನ್ನ ಮೇಲೆ ಮೊದಲ ಬಾರಿ ಅತ್ಯಾಚಾರ ಎಸಗಿದಾಗ ಆತನ ಜತೆ ಮದುವೆ ಮಾಡಿಸುವುದಾಗಿ ಕುಶಾಗ್ರ ತಂದೆ ಯೋಗೇಂದ್ರ ಸಾಗರ್ ಭರವಸೆ ನೀಡಿದ್ದರು ಎಂದು ದೂರಿನಲ್ಲಿ ಹೇಳಿದ್ದಾರೆ.
ಕುಶಾಗ್ರ ಅವರ ಮದುವೆ ಜೂನ 17ರಂದು ನಡೆಯಲಿದೆ. ಈ ಮದುವೆಯಾಗಲು ನಾನು ಬಿಡುವುದಿಲ್ಲ. ಅಕಸ್ಮಾತ್ ಅವರ ವಿವಾಹ ನಡೆದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸಂತ್ರಸ್ಥೆ ತಿಳಿಸಿದ್ದಾರೆ.
ಈ ವಿಚಾರವನ್ನು ಬಯಲು ಮಾಡದಿದ್ದಲ್ಲಿ 20 ಲಕ್ಷ ಹಣ ಕೊಡುವುದಾಗಿಯೂ ಹೇಳಿದ್ದರು. ಇದೀಗ ನನ್ನ ಜೀವನ ಸಂಕಷ್ಟಕ್ಕೆ ಸಿಲುಕಿದೆ. ನಾನೀಗ ಎಲ್ಲಿಗೆ ಹೋಗಲಿ. ಎಂದು ಅಳಲು ತೋಡಿಕೊಂಡಿದ್ದಾರೆ.
ಈಗಾಗಲೇ ಈ ಪ್ರಕರಣದ ಬಗ್ಗೆ ತನಿಖೆಯನ್ನು ಕೈಗೊಳ್ಳಲಾಗಿದೆ. ತನಿಖೆ ಮುಕ್ತಾಯದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಹಿಂದೆ ಅತ್ಯಾಚಾರ ಪ್ರಕರಣದ ಹಿನ್ನೆಲೆ ಬಿಜೆಪಿ ಶಾಸಕ ಕುಲದೀಪ್ ಸಿಂಗರ್ ಜೈಲು ವಾಸ ಅನುಭವಿಸುತ್ತಿದ್ದಾರೆ.