<p><strong>ಬೆಂಗಳೂರು: </strong>ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಹಾರಾಣಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉದ್ಯೋಗಮೇಳದಲ್ಲಿ 991 ಅಭ್ಯರ್ಥಿಗಳು ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾದರು.</p>.<p>ಬೆಳಿಗ್ಗೆ 10ರಿಂದ 5ರವರೆಗೆ ನಡೆದ ಈ ಮೇಳದಲ್ಲಿ 2,158 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. 45 ಕಂಪನಿಗಳು ಸಂದರ್ಶನ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡವು. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಪೂರೈಸಿದವರಿಗೆ ಕೆಲಸ ಪಡೆಯುವ ಅವಕಾಶ ಕಲ್ಪಿಸಲಾಗಿತ್ತು.</p>.<p>ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಕುಲಪತಿ ಡಾ.ಎಲ್. ಗೋಮತಿದೇವಿ, ‘ಸರ್ಕಾರದ ಇಲಾಖೆಯೊಂದು ಮಹಾರಾಣಿ ಕಾಲೇಜಿನಲ್ಲಿ ಉದ್ಯೋಗಮೇಳ ನಡೆಸುತ್ತಿರುವುದು ಸ್ವಾಗತಾರ್ಹ. ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳೂ ಈಗ ಇಂಗ್ಲಿಷ್ ಜ್ಞಾನದಲ್ಲಿ, ಸಂವಹನ ಕಲೆಯಲ್ಲಿ ಸಾಕಷ್ಟು ಮುಂದುವರೆದಿದ್ದಾರೆ. ಸರ್ಕಾರ ಮತ್ತು ಖಾಸಗಿ ಕಂಪನಿಗಳು ಈ ವಿದ್ಯಾರ್ಥಿಗಳಿಗಾಗಿ ಇಂತಹ ಇನ್ನಷ್ಟು ಮೇಳಗಳನ್ನು ನಡೆಸಬೇಕು’ ಎಂದರು.</p>.<p>‘ಅಭ್ಯರ್ಥಿಗಳು ಯಾವ ರೀತಿಯಲ್ಲಿ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು, ಕೌಶಲ ಅಭಿವೃದ್ಧಿ ಪಡಿಸಿಕೊಳ್ಳುವುದು ಹೇಗೆ ಎಂದು ಖಾಸಗಿ ಕಂಪನಿಗಳು ಸಲಹೆ ನೀಡಿದರೆ, ಆ ನಿಟ್ಟಿನಲ್ಲಿ ಶಿಕ್ಷಣ ನೀಡಲು ಪ್ರಯತ್ನಿಸುತ್ತೇವೆ’ ಎಂದೂ ಹೇಳಿದರು.</p>.<p>ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕೆ.ಎಂ. ಸನತ್ಕುಮಾರ್, ‘ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ಈ ಮೇಳಹಮ್ಮಿಕೊಳ್ಳಲಾಗಿದೆ. ತಿಂಗಳಲ್ಲಿ ಈ ರೀತಿಯ ಎರಡು ಕಾರ್ಯಕ್ರಮ ಹಮ್ಮಿಕೊಳ್ಳುವ ಉದ್ದೇಶವಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಹಾರಾಣಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉದ್ಯೋಗಮೇಳದಲ್ಲಿ 991 ಅಭ್ಯರ್ಥಿಗಳು ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾದರು.</p>.<p>ಬೆಳಿಗ್ಗೆ 10ರಿಂದ 5ರವರೆಗೆ ನಡೆದ ಈ ಮೇಳದಲ್ಲಿ 2,158 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. 45 ಕಂಪನಿಗಳು ಸಂದರ್ಶನ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡವು. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಪೂರೈಸಿದವರಿಗೆ ಕೆಲಸ ಪಡೆಯುವ ಅವಕಾಶ ಕಲ್ಪಿಸಲಾಗಿತ್ತು.</p>.<p>ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಕುಲಪತಿ ಡಾ.ಎಲ್. ಗೋಮತಿದೇವಿ, ‘ಸರ್ಕಾರದ ಇಲಾಖೆಯೊಂದು ಮಹಾರಾಣಿ ಕಾಲೇಜಿನಲ್ಲಿ ಉದ್ಯೋಗಮೇಳ ನಡೆಸುತ್ತಿರುವುದು ಸ್ವಾಗತಾರ್ಹ. ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳೂ ಈಗ ಇಂಗ್ಲಿಷ್ ಜ್ಞಾನದಲ್ಲಿ, ಸಂವಹನ ಕಲೆಯಲ್ಲಿ ಸಾಕಷ್ಟು ಮುಂದುವರೆದಿದ್ದಾರೆ. ಸರ್ಕಾರ ಮತ್ತು ಖಾಸಗಿ ಕಂಪನಿಗಳು ಈ ವಿದ್ಯಾರ್ಥಿಗಳಿಗಾಗಿ ಇಂತಹ ಇನ್ನಷ್ಟು ಮೇಳಗಳನ್ನು ನಡೆಸಬೇಕು’ ಎಂದರು.</p>.<p>‘ಅಭ್ಯರ್ಥಿಗಳು ಯಾವ ರೀತಿಯಲ್ಲಿ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು, ಕೌಶಲ ಅಭಿವೃದ್ಧಿ ಪಡಿಸಿಕೊಳ್ಳುವುದು ಹೇಗೆ ಎಂದು ಖಾಸಗಿ ಕಂಪನಿಗಳು ಸಲಹೆ ನೀಡಿದರೆ, ಆ ನಿಟ್ಟಿನಲ್ಲಿ ಶಿಕ್ಷಣ ನೀಡಲು ಪ್ರಯತ್ನಿಸುತ್ತೇವೆ’ ಎಂದೂ ಹೇಳಿದರು.</p>.<p>ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕೆ.ಎಂ. ಸನತ್ಕುಮಾರ್, ‘ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ಈ ಮೇಳಹಮ್ಮಿಕೊಳ್ಳಲಾಗಿದೆ. ತಿಂಗಳಲ್ಲಿ ಈ ರೀತಿಯ ಎರಡು ಕಾರ್ಯಕ್ರಮ ಹಮ್ಮಿಕೊಳ್ಳುವ ಉದ್ದೇಶವಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>