<p><strong>ಬೆಂಗಳೂರು</strong>: ಕೌಶಲ, ಮರುಕೌಶಲ ಹಾಗೂ ಕೌಶಲ ಉನ್ನತೀಕರಣಕ್ಕೆ ಒತ್ತು ನೀಡುವವರಿಗೆ ನಿರುದ್ಯೋಗದ ಸಮಸ್ಯೆ ಎದುರಾಗದು ಎಂದು ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.</p>.<p>ಬಸವ ಜಯಂತಿ ಪ್ರಯುಕ್ತ ಡಾ. ಅಶ್ವತ್ಥ ನಾರಾಯಣ ಫೌಂಡೇಷನ್ ವತಿಯಿಂದ ಏರ್ಪಡಿಸಲಾಗಿದ್ದ ‘ಮಲ್ಲೇಶ್ವರ ಉದ್ಯೋಗ ಮೇಳ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಬುಧವಾರ ಮಾತನಾಡಿದರು.</p>.<p>‘ಹೊಸ ಉದ್ಯಮ ಹಾಗೂ ನವೋದ್ಯಮ ಕ್ಷೇತ್ರಗಳು ಕೌಶಲವಿರುವ ಪ್ರತಿಭಾವಂತರಿಗಾಗಿ ಶೋಧನೆ ನಡೆಸುತ್ತಿವೆ. ಬೆಂಗಳೂರು ನಗರವಂತೂ ಪ್ರಪಂಚದಲ್ಲೇ ಅತ್ಯಂತ ಹೆಚ್ಚು ಬೆಳವಣಿಗೆ ಕಾಣುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಾಗಿ, ಇಲ್ಲಿ ಉದ್ಯೋಗಾವಕಾಶಗಳು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೌಶಲ ಹೊಂದಿದವರು ಮಾತ್ರ ಈ ಅವಕಾಶ ಬಳಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಉದ್ಯೋಗ ಮೇಳದಲ್ಲಿ 97 ಕಂಪನಿಗಳು, 1,075 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. 104 ಅಭ್ಯರ್ಥಿಗಳು ಸ್ಥಳದಲ್ಲೇ ನೇಮಕಗೊಂಡರು, 506 ಅಭ್ಯರ್ಥಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಫೌಂಡೇಶನ್ ತಿಳಿಸಿದೆ.</p>.<p>ಈಶ್ವರ ಸೇವಾ ಮಂಡಳಿ ಅಧ್ಯಕ್ಷೆ ಸೌಭಾಗ್ಯ, ಎಫ್ಕೆಸಿಸಿಐ ಅಧ್ಯಕ್ಷ ಬಾಲಕೃಷ್ಣ, ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ಹರೀಶ್, ನಟ ಗಣೇಶ್ ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೌಶಲ, ಮರುಕೌಶಲ ಹಾಗೂ ಕೌಶಲ ಉನ್ನತೀಕರಣಕ್ಕೆ ಒತ್ತು ನೀಡುವವರಿಗೆ ನಿರುದ್ಯೋಗದ ಸಮಸ್ಯೆ ಎದುರಾಗದು ಎಂದು ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.</p>.<p>ಬಸವ ಜಯಂತಿ ಪ್ರಯುಕ್ತ ಡಾ. ಅಶ್ವತ್ಥ ನಾರಾಯಣ ಫೌಂಡೇಷನ್ ವತಿಯಿಂದ ಏರ್ಪಡಿಸಲಾಗಿದ್ದ ‘ಮಲ್ಲೇಶ್ವರ ಉದ್ಯೋಗ ಮೇಳ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಬುಧವಾರ ಮಾತನಾಡಿದರು.</p>.<p>‘ಹೊಸ ಉದ್ಯಮ ಹಾಗೂ ನವೋದ್ಯಮ ಕ್ಷೇತ್ರಗಳು ಕೌಶಲವಿರುವ ಪ್ರತಿಭಾವಂತರಿಗಾಗಿ ಶೋಧನೆ ನಡೆಸುತ್ತಿವೆ. ಬೆಂಗಳೂರು ನಗರವಂತೂ ಪ್ರಪಂಚದಲ್ಲೇ ಅತ್ಯಂತ ಹೆಚ್ಚು ಬೆಳವಣಿಗೆ ಕಾಣುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಾಗಿ, ಇಲ್ಲಿ ಉದ್ಯೋಗಾವಕಾಶಗಳು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೌಶಲ ಹೊಂದಿದವರು ಮಾತ್ರ ಈ ಅವಕಾಶ ಬಳಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಉದ್ಯೋಗ ಮೇಳದಲ್ಲಿ 97 ಕಂಪನಿಗಳು, 1,075 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. 104 ಅಭ್ಯರ್ಥಿಗಳು ಸ್ಥಳದಲ್ಲೇ ನೇಮಕಗೊಂಡರು, 506 ಅಭ್ಯರ್ಥಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಫೌಂಡೇಶನ್ ತಿಳಿಸಿದೆ.</p>.<p>ಈಶ್ವರ ಸೇವಾ ಮಂಡಳಿ ಅಧ್ಯಕ್ಷೆ ಸೌಭಾಗ್ಯ, ಎಫ್ಕೆಸಿಸಿಐ ಅಧ್ಯಕ್ಷ ಬಾಲಕೃಷ್ಣ, ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ಹರೀಶ್, ನಟ ಗಣೇಶ್ ರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>