<p><strong>ಬೆಂಗಳೂರು</strong>: ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಆಕಾಂಕ್ಷಿಗಳಿಂದ ₹40 ಲಕ್ಷ ಪಡೆದು ವಂಚಿಸಲಾಗಿದೆ.</p>.<p>ಈ ಬಗ್ಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ 50 ವರ್ಷದ ವ್ಯಕ್ತಿಯೊಬ್ಬರು ತಮಿಳುನಾಡಿನ ನೆಲ್ಲಿಕುಪ್ಪಂನಲ್ಲಿ ಎಲ್ಐಸಿ ಉದ್ಯೋಗಿಯಾಗಿರುವ ಷಣ್ಮುಗಂರಾಜ್, ವೈಷ್ಣವಿ ಹಾಗೂ ರಾಜೇಶ್ ಚಿಟ್ಟಿ ಎಂಬುವವರ ವಿರುದ್ಧ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>‘ಆರೋಪಿ ಷಣ್ಮುಗರಾಜ್ ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದ. ‘2021ರಲ್ಲಿ ಎಲ್ಐಸಿ ಕಚೇರಿಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ನನಗೆ ಹಣ ಕೊಟ್ಟರೆ ಎಲ್ಐಸಿ ಕಚೇರಿಯಲ್ಲಿ ಕೆಲಸ ಕೊಡಿಸುತ್ತೇನೆ’ ಎಂದು ತಿಳಿಸಿದ್ದ. ಇದನ್ನು ನಂಬಿದ್ದ ದೂರುದಾರರು ಹಂತ–ಹಂತವಾಗಿ ₹40 ಲಕ್ಷ ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ದೂರುದಾರರ ಹೆಂಡತಿ ಹಾಗೂ ಮಾವನ ಮಗಳು ಸೇರಿದಂತೆ ಒಟ್ಟು ಏಳು ಜನರಿಗೆ ಉದ್ಯೋಗ ಕೊಡಿಸುವ ಮಾತುಕತೆ ಆಗಿತ್ತು. ‘ನನ್ನ ಸ್ನೇಹಿತನ ಮೂಲಕ ಒಟ್ಟು ₹18 ಲಕ್ಷ ಹಣವನ್ನು ಷಣ್ಮುಗರಾಜ್ಗೆ ನೀಡಿದ್ದೆವು. ನಂತರ ಫೋನ್ ಪೇ–, ಗೂಗಲ್ ಪೇ ಮೂಲಕ ಆರೋಪಿಯ ಬ್ಯಾಂಕ್ ಖಾತೆಗೆ ಹಂತ–ಹಂತವಾಗಿ ಒಟ್ಟು ₹40 ಲಕ್ಷ ಹಣ ಸಂದಾಯ ಮಾಡಲಾಗಿತ್ತು’ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.</p>.<p>‘ಹಣ ಪಡೆದ ನಂತರ ಷಣ್ಮುಗರಾಜ್ ಹಲವರ ಮೊಬೈಲ್ ಸಂಖ್ಯೆಗಳಿಗೆ ವಾಟ್ಸ್ ಆ್ಯಪ್ ಮೂಲಕ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದ. ಆದರೆ, ಆ ನೇಮಕಾತಿ ಪತ್ರಗಳು ನಕಲಿ ಎಂಬುದು ನಂತರ ಗೊತ್ತಾಗಿದೆ. ಆರೋಪಿ ಕೆಲಸ ಕೊಡಿಸುವ ನೆಪದಲ್ಲಿ ಹಣ ಪಡೆದು ವಂಚಿಸಿದ್ದಾನೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಆಕಾಂಕ್ಷಿಗಳಿಂದ ₹40 ಲಕ್ಷ ಪಡೆದು ವಂಚಿಸಲಾಗಿದೆ.</p>.<p>ಈ ಬಗ್ಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ 50 ವರ್ಷದ ವ್ಯಕ್ತಿಯೊಬ್ಬರು ತಮಿಳುನಾಡಿನ ನೆಲ್ಲಿಕುಪ್ಪಂನಲ್ಲಿ ಎಲ್ಐಸಿ ಉದ್ಯೋಗಿಯಾಗಿರುವ ಷಣ್ಮುಗಂರಾಜ್, ವೈಷ್ಣವಿ ಹಾಗೂ ರಾಜೇಶ್ ಚಿಟ್ಟಿ ಎಂಬುವವರ ವಿರುದ್ಧ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>‘ಆರೋಪಿ ಷಣ್ಮುಗರಾಜ್ ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದ. ‘2021ರಲ್ಲಿ ಎಲ್ಐಸಿ ಕಚೇರಿಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ನನಗೆ ಹಣ ಕೊಟ್ಟರೆ ಎಲ್ಐಸಿ ಕಚೇರಿಯಲ್ಲಿ ಕೆಲಸ ಕೊಡಿಸುತ್ತೇನೆ’ ಎಂದು ತಿಳಿಸಿದ್ದ. ಇದನ್ನು ನಂಬಿದ್ದ ದೂರುದಾರರು ಹಂತ–ಹಂತವಾಗಿ ₹40 ಲಕ್ಷ ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ದೂರುದಾರರ ಹೆಂಡತಿ ಹಾಗೂ ಮಾವನ ಮಗಳು ಸೇರಿದಂತೆ ಒಟ್ಟು ಏಳು ಜನರಿಗೆ ಉದ್ಯೋಗ ಕೊಡಿಸುವ ಮಾತುಕತೆ ಆಗಿತ್ತು. ‘ನನ್ನ ಸ್ನೇಹಿತನ ಮೂಲಕ ಒಟ್ಟು ₹18 ಲಕ್ಷ ಹಣವನ್ನು ಷಣ್ಮುಗರಾಜ್ಗೆ ನೀಡಿದ್ದೆವು. ನಂತರ ಫೋನ್ ಪೇ–, ಗೂಗಲ್ ಪೇ ಮೂಲಕ ಆರೋಪಿಯ ಬ್ಯಾಂಕ್ ಖಾತೆಗೆ ಹಂತ–ಹಂತವಾಗಿ ಒಟ್ಟು ₹40 ಲಕ್ಷ ಹಣ ಸಂದಾಯ ಮಾಡಲಾಗಿತ್ತು’ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.</p>.<p>‘ಹಣ ಪಡೆದ ನಂತರ ಷಣ್ಮುಗರಾಜ್ ಹಲವರ ಮೊಬೈಲ್ ಸಂಖ್ಯೆಗಳಿಗೆ ವಾಟ್ಸ್ ಆ್ಯಪ್ ಮೂಲಕ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದ. ಆದರೆ, ಆ ನೇಮಕಾತಿ ಪತ್ರಗಳು ನಕಲಿ ಎಂಬುದು ನಂತರ ಗೊತ್ತಾಗಿದೆ. ಆರೋಪಿ ಕೆಲಸ ಕೊಡಿಸುವ ನೆಪದಲ್ಲಿ ಹಣ ಪಡೆದು ವಂಚಿಸಿದ್ದಾನೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>