<p><strong>ಕೆ.ಆರ್.ಪುರ:</strong> ‘ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ದೊರಕಿಸಿಕೊಡಲು ಮೇ 23ರ ನಂತರ ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.</p>.<p>‘ರಾಜ್ಯದಲ್ಲಿ ಕನ್ನಡ ಮಾತನಾಡುವವರಿಗೆ ಪ್ರಾತಿನಿಧ್ಯ ನೀಡಬೇಕು. ಹಾಗಂತ ಬೇರೆ ಭಾಷೆ ಕಲಿಯಬೇಡಿ ಎಂದು ಹೇಳುವುದಿಲ್ಲ. ಕನ್ನಡಕ್ಕೆ ಧಕ್ಕೆ ಬಂದರೆ ಸುಮ್ಮನಿರಲು ಸಾಧ್ಯವಿಲ್ಲ. ನಮ್ಮ ಭಾಷೆಯ ಮೇಲೆ ಇತರ ಭಾಷೆಯನ್ನು ಹೇರಲು ಮುಂದಾದರೆ, ಅದರ ವಿರುದ್ಧ ಹೋರಾಡಲು ಸಿದ್ಧವಿರಬೇಕು’ ಎಂದರು.</p>.<p>ಥಣಿಸಂದ್ರ ಮುಖ್ಯರಸ್ತೆಯ ಆರ್.ಕೆ.ಹೆಗಡೆ ನಗರದಲ್ಲಿ ಸಾಯಿ ಕಲ್ಯಾಣ್ ಸುಪಿರಿಯಾ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸಾಯಿಕಲ್ಯಾಣ ಬಿಲ್ಡರ್ಸ್ ಮಾಲೀಕ ವೇಣುಗೋಪಾಲ್,‘ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಮನೆಗಳನ್ನು ಕಟ್ಟುತ್ತಿದ್ದೇವೆ. ಇಲ್ಲಿ 200 ಮನೆಗಳು ನಿರ್ಮಾಣ ಆಗಲಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ದೊರಕಿಸಿಕೊಡಲು ಮೇ 23ರ ನಂತರ ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.</p>.<p>‘ರಾಜ್ಯದಲ್ಲಿ ಕನ್ನಡ ಮಾತನಾಡುವವರಿಗೆ ಪ್ರಾತಿನಿಧ್ಯ ನೀಡಬೇಕು. ಹಾಗಂತ ಬೇರೆ ಭಾಷೆ ಕಲಿಯಬೇಡಿ ಎಂದು ಹೇಳುವುದಿಲ್ಲ. ಕನ್ನಡಕ್ಕೆ ಧಕ್ಕೆ ಬಂದರೆ ಸುಮ್ಮನಿರಲು ಸಾಧ್ಯವಿಲ್ಲ. ನಮ್ಮ ಭಾಷೆಯ ಮೇಲೆ ಇತರ ಭಾಷೆಯನ್ನು ಹೇರಲು ಮುಂದಾದರೆ, ಅದರ ವಿರುದ್ಧ ಹೋರಾಡಲು ಸಿದ್ಧವಿರಬೇಕು’ ಎಂದರು.</p>.<p>ಥಣಿಸಂದ್ರ ಮುಖ್ಯರಸ್ತೆಯ ಆರ್.ಕೆ.ಹೆಗಡೆ ನಗರದಲ್ಲಿ ಸಾಯಿ ಕಲ್ಯಾಣ್ ಸುಪಿರಿಯಾ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸಾಯಿಕಲ್ಯಾಣ ಬಿಲ್ಡರ್ಸ್ ಮಾಲೀಕ ವೇಣುಗೋಪಾಲ್,‘ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಮನೆಗಳನ್ನು ಕಟ್ಟುತ್ತಿದ್ದೇವೆ. ಇಲ್ಲಿ 200 ಮನೆಗಳು ನಿರ್ಮಾಣ ಆಗಲಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>