ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

351 ಅಭ್ಯರ್ಥಿಗಳಿಗೆ ಉದ್ಯೋಗ ಭಾಗ್ಯ

Last Updated 4 ಸೆಪ್ಟೆಂಬರ್ 2021, 21:32 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮಲ್ಲೇಶ್ವರದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 351 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಯಿತು.

ಮೇಳದಲ್ಲಿ 42ಕ್ಕೂ ಹೆಚ್ಚು ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಿದವು. ಒಟ್ಟು 2,050 ಅಭ್ಯರ್ಥಿಗಳು ನೋಂದಾಯಿಸಿಕೊಂಡು, 1510 ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪೈಕಿ 582 ಅಭ್ಯರ್ಥಿಗಳನ್ನು ಪಟ್ಟಿ ಮಾಡಿದ ನಂತರ ಅಂತಿಮವಾಗಿ 351 ಅಭ್ಯರ್ಥಿಗಳು ವಿವಿಧ ಕಂಪನಿಗಳ ಕೆಲಸಕ್ಕೆ ಆಯ್ಕೆಯಾದರು.

ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲ ಖಾತೆ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.

‘ರಾಜ್ಯದಲ್ಲಿ ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕುಶಲ ಸಂಪನ್ಮೂಲ ಒದಗಿಸುವ ಕೆಲಸವನ್ನು ಸರ್ಕಾರಮಾಡುತ್ತಿದೆ. ಈ ನಿಟ್ಟಿನಲ್ಲಿ ಎಷ್ಟೇ ಉದ್ಯೋಗಾಕಾಂಕ್ಷಿಗಳು ಬಂದರೂ ಅಗತ್ಯ ತರಬೇತಿ, ಭಾಷಾ ಕೌಶಲ ಕಲಿಸಿ ಕೆಲಸ ಕೊಡಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT