<p><strong>ಬೆಂಗಳೂರು</strong>: ‘2020ರ ಸ್ವಚ್ಛ ಸರ್ವೇಕ್ಷಣೆ ಅಭಿಯಾನದಲ್ಲಿ ಬೆಂಗಳೂರು ನಗರವು ಉತ್ತಮ ಅಂಕ ಗಳಿಸುವಲ್ಲಿ ಜನರ ಪಾತ್ರವೂ ಮುಖ್ಯವಾದುದು. ಸ್ವಚ್ಛ ಬೆಂಗಳೂರಿನ ನಿರ್ಮಾಣಕ್ಕೆ ಜನರೂ ಪಾಲಿಕೆ ಜೊತೆ ಕೈಜೋಡಿಸಬೇಕು’ ಎಂದು ಮೇಯರ್ ಎಂ.ಗೌತಮ್ ಕುಮಾರ್ ಮನವಿ ಮಾಡಿದರು.</p>.<p>ಸ್ವಚ್ಛ ಸರ್ವೇಕ್ಷಣೆ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸುವ ಸಲುವಾಗಿ ಅವರು ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು.</p>.<p>'ಪಾಲಿಕೆ ವ್ಯಾಪ್ತಿಯಲ್ಲಿ ಸಮರ್ಪಕ ಕಸ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇವುಗಳ ಯಶಸ್ವಿ ಅನುಷ್ಠಾನಕ್ಕೆ ಎಲ್ಲರೂ ಸಹಕರಿಸಬೇಕು’ ಎಂದರು.</p>.<p>ಸ್ವಚ್ಛ ಸರ್ವೇಕ್ಷಣ್ ಸರ್ವೆಗೆ ನಡೆದಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ವಿಶೇಷ ಆಯುಕ್ತ (ಕಸ ವಿಲೇವಾರಿ) ಡಿ.ರಂದೀಪ್, ‘ಈ ಹಿಂದೆ ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಪಾಲನೆ ಮಾಡುವ ನಿಯಮಗಳ ಬಗ್ಗೆ ಸಮರ್ಪಕ ಮಾಹಿತಿ ಇರಲಿಲ್ಲ. ಆ ಕಾರಣಕ್ಕಾಗಿ ಪರಿಣಿತ ತಂಡವನ್ನು ನಿಯೋಜನೆ ಮಾಡಿಕೊಂಡು ಸ್ವಚ್ಛ ಸರ್ವೇಕ್ಷಣ್ ನಲ್ಲಿ ಬೆಂಗಳೂರಿಗೆ ಉತ್ತಮ ಅಂಕ ಪಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರನ್ನು ಈಗಾಗಲೇ ಬಯಲು ಶೌಚಾಲಯಮುಕ್ತ (ಒಡಿಎಫ್) ಎಂದು ಘೋಷಣೆ ಮಾಡಲಾಗಿದೆ. ಒಡಿಎಫ್ ಸ್ಥಾನಮಾನಕ್ಕೆ ಈ ಬಾರಿ 500 ಅಂಕ ನಿಗದಿಪಡಿಸಲಾಗಿದೆ. ಒಡಿಎಫ್ ಪ್ಲಸ್ ಪ್ಲಸ್ ಸ್ಥಾನಮಾನ ಗಳಿಸಲು ಶ್ರಮ ವಹಿಸಲಾಗುತ್ತಿದೆ’ ಎಂದರು.</p>.<p>‘ಈ ಬಾರಿಯ ಅಭಿಯಾನದಲ್ಲಿ 4 ಸಾವಿರಕ್ಕೂ ಹೆಚ್ಚು ನಗರಗಳು ಪಾಲ್ಗೊಳ್ಳುತ್ತಿವೆ. ಅಗ್ರ 100ರ ಒಳಗಿನ ಸ್ಥಾನವನ್ನು ಗಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘2020ರ ಸ್ವಚ್ಛ ಸರ್ವೇಕ್ಷಣೆ ಅಭಿಯಾನದಲ್ಲಿ ಬೆಂಗಳೂರು ನಗರವು ಉತ್ತಮ ಅಂಕ ಗಳಿಸುವಲ್ಲಿ ಜನರ ಪಾತ್ರವೂ ಮುಖ್ಯವಾದುದು. ಸ್ವಚ್ಛ ಬೆಂಗಳೂರಿನ ನಿರ್ಮಾಣಕ್ಕೆ ಜನರೂ ಪಾಲಿಕೆ ಜೊತೆ ಕೈಜೋಡಿಸಬೇಕು’ ಎಂದು ಮೇಯರ್ ಎಂ.ಗೌತಮ್ ಕುಮಾರ್ ಮನವಿ ಮಾಡಿದರು.</p>.<p>ಸ್ವಚ್ಛ ಸರ್ವೇಕ್ಷಣೆ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸುವ ಸಲುವಾಗಿ ಅವರು ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು.</p>.<p>'ಪಾಲಿಕೆ ವ್ಯಾಪ್ತಿಯಲ್ಲಿ ಸಮರ್ಪಕ ಕಸ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇವುಗಳ ಯಶಸ್ವಿ ಅನುಷ್ಠಾನಕ್ಕೆ ಎಲ್ಲರೂ ಸಹಕರಿಸಬೇಕು’ ಎಂದರು.</p>.<p>ಸ್ವಚ್ಛ ಸರ್ವೇಕ್ಷಣ್ ಸರ್ವೆಗೆ ನಡೆದಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ವಿಶೇಷ ಆಯುಕ್ತ (ಕಸ ವಿಲೇವಾರಿ) ಡಿ.ರಂದೀಪ್, ‘ಈ ಹಿಂದೆ ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಪಾಲನೆ ಮಾಡುವ ನಿಯಮಗಳ ಬಗ್ಗೆ ಸಮರ್ಪಕ ಮಾಹಿತಿ ಇರಲಿಲ್ಲ. ಆ ಕಾರಣಕ್ಕಾಗಿ ಪರಿಣಿತ ತಂಡವನ್ನು ನಿಯೋಜನೆ ಮಾಡಿಕೊಂಡು ಸ್ವಚ್ಛ ಸರ್ವೇಕ್ಷಣ್ ನಲ್ಲಿ ಬೆಂಗಳೂರಿಗೆ ಉತ್ತಮ ಅಂಕ ಪಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರನ್ನು ಈಗಾಗಲೇ ಬಯಲು ಶೌಚಾಲಯಮುಕ್ತ (ಒಡಿಎಫ್) ಎಂದು ಘೋಷಣೆ ಮಾಡಲಾಗಿದೆ. ಒಡಿಎಫ್ ಸ್ಥಾನಮಾನಕ್ಕೆ ಈ ಬಾರಿ 500 ಅಂಕ ನಿಗದಿಪಡಿಸಲಾಗಿದೆ. ಒಡಿಎಫ್ ಪ್ಲಸ್ ಪ್ಲಸ್ ಸ್ಥಾನಮಾನ ಗಳಿಸಲು ಶ್ರಮ ವಹಿಸಲಾಗುತ್ತಿದೆ’ ಎಂದರು.</p>.<p>‘ಈ ಬಾರಿಯ ಅಭಿಯಾನದಲ್ಲಿ 4 ಸಾವಿರಕ್ಕೂ ಹೆಚ್ಚು ನಗರಗಳು ಪಾಲ್ಗೊಳ್ಳುತ್ತಿವೆ. ಅಗ್ರ 100ರ ಒಳಗಿನ ಸ್ಥಾನವನ್ನು ಗಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>