<p><strong>ಬೆಂಗಳೂರು:</strong> ಕೊರೊನಾ ಸೋಂಕು ಲೆಕ್ಕಿಸದೇ, ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸೇನಾನಿಗಳಂತೆ ಕೆಲಸ ಮಾಡುತ್ತಿರುವಪತ್ರಕರ್ತರಿಗೂ ವಿಮಾ ಪರಿಹಾರ ಯೋಜನೆ ಜಾರಿಗೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<p>ಪೊಲೀಸರು, ಆಶಾ ಕಾರ್ಯಕರ್ತೆಯರ ಸಹಿತ ಕೊರೊನಾ ಸೇನಾನಿಗಳಿಗೆ ಒದಗಿಸಲಾಗಿರುವ ₹ 30 ಲಕ್ಷದ ವಿಮಾ ಪರಿಹಾರ ಪ್ಯಾಕೇಜ್ ಅನ್ನು ಪತ್ರಕರ್ತರಿಗೂ ವಿಸ್ತರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಎಡಿಟರ್ಸ್ ಗಿಲ್ಡ್ನ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಶುಕ್ರವಾರ ಇಲ್ಲಿ ಭೇಟಿ ಮಾಡಿದ ಪತ್ರಕರ್ತರ ನಿಯೋಗ, ವಿಮಾ ಪ್ಯಾಕೇಜ್ಗೆ ಪತ್ರಕರ್ತರನ್ನು ಸೇರಿಸುವಂತೆ ಮನವಿ ಮಾಡಿತು.</p>.<p><strong>ಪರಿಹಾರ:</strong> ಇತ್ತೀಚೆಗೆ ಮೃತಪಟ್ಟ ‘ವಿಜಯಕರ್ನಾಟಕ’ದ ಗೌರಿಪುರ ಚಂದ್ರು ಮತ್ತು ‘ಪ್ರಜಾವಾಣಿ’ಯ ಬೇಲೂರು ವರದಿಗಾರ ಬಿ.ಎಂ.ರವೀಶ್ ಕುಟುಂಬಕ್ಕೆ ಮುಖ್ಯಮಂತ್ರಿ ತಲಾ ₹ 5 ಲಕ್ಷ ಪರಿಹಾರ ಮಂಜೂರು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕು ಲೆಕ್ಕಿಸದೇ, ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸೇನಾನಿಗಳಂತೆ ಕೆಲಸ ಮಾಡುತ್ತಿರುವಪತ್ರಕರ್ತರಿಗೂ ವಿಮಾ ಪರಿಹಾರ ಯೋಜನೆ ಜಾರಿಗೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<p>ಪೊಲೀಸರು, ಆಶಾ ಕಾರ್ಯಕರ್ತೆಯರ ಸಹಿತ ಕೊರೊನಾ ಸೇನಾನಿಗಳಿಗೆ ಒದಗಿಸಲಾಗಿರುವ ₹ 30 ಲಕ್ಷದ ವಿಮಾ ಪರಿಹಾರ ಪ್ಯಾಕೇಜ್ ಅನ್ನು ಪತ್ರಕರ್ತರಿಗೂ ವಿಸ್ತರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಎಡಿಟರ್ಸ್ ಗಿಲ್ಡ್ನ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಶುಕ್ರವಾರ ಇಲ್ಲಿ ಭೇಟಿ ಮಾಡಿದ ಪತ್ರಕರ್ತರ ನಿಯೋಗ, ವಿಮಾ ಪ್ಯಾಕೇಜ್ಗೆ ಪತ್ರಕರ್ತರನ್ನು ಸೇರಿಸುವಂತೆ ಮನವಿ ಮಾಡಿತು.</p>.<p><strong>ಪರಿಹಾರ:</strong> ಇತ್ತೀಚೆಗೆ ಮೃತಪಟ್ಟ ‘ವಿಜಯಕರ್ನಾಟಕ’ದ ಗೌರಿಪುರ ಚಂದ್ರು ಮತ್ತು ‘ಪ್ರಜಾವಾಣಿ’ಯ ಬೇಲೂರು ವರದಿಗಾರ ಬಿ.ಎಂ.ರವೀಶ್ ಕುಟುಂಬಕ್ಕೆ ಮುಖ್ಯಮಂತ್ರಿ ತಲಾ ₹ 5 ಲಕ್ಷ ಪರಿಹಾರ ಮಂಜೂರು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>