<p><strong>ಬೆಂಗಳೂರು: </strong>ನಗರದ ಪುರಭವನ ಬಳಿ ಭಾನುವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಪತ್ರಕರ್ತ ಎಸ್.ಎಸ್. ಗಂಗಾಧರಮೂರ್ತಿ (49) ಮೃತಪಟ್ಟಿದ್ದಾರೆ.</p>.<p>ಶೃಂಗೇರಿಯ ಗಂಗಾಧರ ಮೂರ್ತಿ, ‘ವಿಜಯವಾಣಿ’ ದಿನ ಪತ್ರಿಕೆಯಲ್ಲಿ ಮುಖ್ಯ ಉಪ ಸಂಪಾದಕರಾಗಿದ್ದರು. ‘ಚಾಮರಾಜ ಪೇಟೆಯಲ್ಲಿರುವ ಪತ್ರಿಕಾ ಕಚೇರಿಗೆ ಕೆಲಸಕ್ಕೆಂದು ಬೈಕ್ನಲ್ಲಿ ಹೊರಟಿ ದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಹಲಸೂರು ಗೇಟ್ ಸಂಚಾರ ಪೊಲೀಸರು ತಿಳಿಸಿದರು.</p>.<p>‘ಗಂಗಾಧರಮೂರ್ತಿ ಅವರು ಬೈಕ್ನಲ್ಲಿ ಪುರಭವನ ಎದುರಿನ ರಸ್ತೆಯಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲೇ ವೇಗವಾಗಿ ಬಂದ ಟಿಪ್ಪರ್ ಲಾರಿ, ರಸ್ತೆ ವಿಭಜಕಕ್ಕೆ ಗುದ್ದಿ ಬೈಕ್ಗೆ ಡಿಕ್ಕಿ ಹೊಡೆದು ಉರುಳಿಬಿದ್ದಿತ್ತು. ಲಾರಿಯಡಿ ಸಿಲುಕಿದ್ದ ಅವರ ತಲೆ ಹಾಗೂ ದೇಹದ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿತ್ತು.’</p>.<p>‘ತೀವ್ರ ಗಾಯಗೊಂಡಿದ್ದ ಗಂಗಾಧರ ಮೂರ್ತಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆ ದೊಯ್ಯಲಾ ಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ತೀರಿಕೊಂಡಿದ್ದಾರೆ‘ ಎಂದೂ ತಿಳಿಸಿದರು.</p>.<p>‘ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.</p>.<p>ಗಂಗಾಧರಮೂರ್ತಿ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಪುರಭವನ ಬಳಿ ಭಾನುವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಪತ್ರಕರ್ತ ಎಸ್.ಎಸ್. ಗಂಗಾಧರಮೂರ್ತಿ (49) ಮೃತಪಟ್ಟಿದ್ದಾರೆ.</p>.<p>ಶೃಂಗೇರಿಯ ಗಂಗಾಧರ ಮೂರ್ತಿ, ‘ವಿಜಯವಾಣಿ’ ದಿನ ಪತ್ರಿಕೆಯಲ್ಲಿ ಮುಖ್ಯ ಉಪ ಸಂಪಾದಕರಾಗಿದ್ದರು. ‘ಚಾಮರಾಜ ಪೇಟೆಯಲ್ಲಿರುವ ಪತ್ರಿಕಾ ಕಚೇರಿಗೆ ಕೆಲಸಕ್ಕೆಂದು ಬೈಕ್ನಲ್ಲಿ ಹೊರಟಿ ದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಹಲಸೂರು ಗೇಟ್ ಸಂಚಾರ ಪೊಲೀಸರು ತಿಳಿಸಿದರು.</p>.<p>‘ಗಂಗಾಧರಮೂರ್ತಿ ಅವರು ಬೈಕ್ನಲ್ಲಿ ಪುರಭವನ ಎದುರಿನ ರಸ್ತೆಯಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲೇ ವೇಗವಾಗಿ ಬಂದ ಟಿಪ್ಪರ್ ಲಾರಿ, ರಸ್ತೆ ವಿಭಜಕಕ್ಕೆ ಗುದ್ದಿ ಬೈಕ್ಗೆ ಡಿಕ್ಕಿ ಹೊಡೆದು ಉರುಳಿಬಿದ್ದಿತ್ತು. ಲಾರಿಯಡಿ ಸಿಲುಕಿದ್ದ ಅವರ ತಲೆ ಹಾಗೂ ದೇಹದ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿತ್ತು.’</p>.<p>‘ತೀವ್ರ ಗಾಯಗೊಂಡಿದ್ದ ಗಂಗಾಧರ ಮೂರ್ತಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆ ದೊಯ್ಯಲಾ ಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ತೀರಿಕೊಂಡಿದ್ದಾರೆ‘ ಎಂದೂ ತಿಳಿಸಿದರು.</p>.<p>‘ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.</p>.<p>ಗಂಗಾಧರಮೂರ್ತಿ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>