<p><strong>ಬೆಂಗಳೂರು:</strong> ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ, ‘ವಾಯ್ಸ್ ಆಫ್ ಯಲಹಂಕ’ ಪತ್ರಿಕೆಯ ಸಂಪಾದಕ ಅನಿಲ್ ರಾಜ್ (55)ಅವರ ಮೃತದೇಹ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಂಗಳವಾರ ಸಂಜೆ ಪತ್ತೆಯಾಗಿದೆ.</p>.<p>ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅನಿಲ್ ರಾಜ್, ಯಲಹಂಕ ಮಾರುತಿ ನಗರದ ನಿವಾಸಿ. ಜೈಲಿನ ಆವರಣದಲ್ಲಿರುವ ದೇವಸ್ಥಾನದ ಮುಂಭಾಗದಲ್ಲಿ ಅಳವಡಿಸಿರುವ ಕಬ್ಬಿಣದ ರಾಡ್ಗೆ ಅನಿಲ್ ರಾಜ್ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.</p>.<p>ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅನಿಲ್ ರಾಜ್ ಅವರನ್ನು ಜೈಲಿನ ಐದನೇ ಬ್ಯಾರಕ್ನಲ್ಲಿ ಇಡಲಾಗಿತ್ತು. ಜೈಲಿನಲ್ಲಿ ನಿತ್ಯ ಸಂಜೆ ಏಳು ಗಂಟೆ ಸುಮಾರಿಗೆ ಎಲ್ಲ ಕೈದಿಗಳನ್ನು ಲೆಕ್ಕ ಮಾಡಲಾಗುತ್ತದೆ. ಈ ವೇಳೆ ಅನಿಲ್ರಾಜ್ ನಾಪತ್ತೆಯಾಗಿದ್ದರು. ತಕ್ಷಣ ಜೈಲು ಸಿಬ್ಬಂದಿ ಹುಡುಕಾಡಿದ್ದು, ಈ ವೇಳೆ ವಿಷಯ ಗೊತ್ತಾಗಿದೆ.</p>.<p>ಅನಿಲ್ ರಾಜ್ ದೇಹವನ್ನು ಆಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಜೈಲಿನ ಅಧಿಕಾರಿಯೊಬ್ಬರುತಿಳಿಸಿದರು.</p>.<p>ಮಂಗಳವಾರ ಮಧ್ಯಾಹ್ನ ಜೈಲಿಗೆ ಪತ್ನಿ ಮತ್ತು ಕುಟುಂಬ ಸದಸ್ಯರು ಬಂದಿದ್ದು, ಕೆಲ ಹೊತ್ತು ಅವರ ಜತೆ ಅನಿಲ್ ರಾಜ್ ಮಾತುಕತೆ ನಡೆಸಿದ್ದರು. ಈ ವೇಳೆ ಕುಟುಂಬ ಸದಸ್ಯರು ಮತ್ತು ಅನಿಲ್ರಾಜ್ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.</p>.<p>ಸಂಜೆ ಏಳು ಗಂಟೆ ಹೊತ್ತಿಗೆ ಅನಿಲ್ರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.</p>.<p>ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ತಿಳಿಯಲಿದೆ ಎಂದೂ ಅಧಿಕಾರಿ ಮಾಹಿತಿ ನೀಡಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂಥ್, ‘ಯಲಹಂಕ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಅನಿಲ್ ರಾಜ್ ಮಂಗಳವಾರ ಸಂಜೆ ಜೈಲಿನ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನ್ಯಾಯಾಂಗ ಬಂಧನದಲ್ಲೇ ಮೃತಪಟ್ಟಿರುವುದರಿಂದ ಮ್ಯಾಜಿಸ್ಟ್ರೇಟ್ ಬಂದುವಿಚಾರಣೆ ನಡೆಸುತ್ತಾರೆ’ ಎಂದರು.</p>.<p>ಅನಿಲ್ರಾಜ್ ತಮ್ಮ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆ. 30ರಂದು ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ, ‘ವಾಯ್ಸ್ ಆಫ್ ಯಲಹಂಕ’ ಪತ್ರಿಕೆಯ ಸಂಪಾದಕ ಅನಿಲ್ ರಾಜ್ (55)ಅವರ ಮೃತದೇಹ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಂಗಳವಾರ ಸಂಜೆ ಪತ್ತೆಯಾಗಿದೆ.</p>.<p>ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅನಿಲ್ ರಾಜ್, ಯಲಹಂಕ ಮಾರುತಿ ನಗರದ ನಿವಾಸಿ. ಜೈಲಿನ ಆವರಣದಲ್ಲಿರುವ ದೇವಸ್ಥಾನದ ಮುಂಭಾಗದಲ್ಲಿ ಅಳವಡಿಸಿರುವ ಕಬ್ಬಿಣದ ರಾಡ್ಗೆ ಅನಿಲ್ ರಾಜ್ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.</p>.<p>ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅನಿಲ್ ರಾಜ್ ಅವರನ್ನು ಜೈಲಿನ ಐದನೇ ಬ್ಯಾರಕ್ನಲ್ಲಿ ಇಡಲಾಗಿತ್ತು. ಜೈಲಿನಲ್ಲಿ ನಿತ್ಯ ಸಂಜೆ ಏಳು ಗಂಟೆ ಸುಮಾರಿಗೆ ಎಲ್ಲ ಕೈದಿಗಳನ್ನು ಲೆಕ್ಕ ಮಾಡಲಾಗುತ್ತದೆ. ಈ ವೇಳೆ ಅನಿಲ್ರಾಜ್ ನಾಪತ್ತೆಯಾಗಿದ್ದರು. ತಕ್ಷಣ ಜೈಲು ಸಿಬ್ಬಂದಿ ಹುಡುಕಾಡಿದ್ದು, ಈ ವೇಳೆ ವಿಷಯ ಗೊತ್ತಾಗಿದೆ.</p>.<p>ಅನಿಲ್ ರಾಜ್ ದೇಹವನ್ನು ಆಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಜೈಲಿನ ಅಧಿಕಾರಿಯೊಬ್ಬರುತಿಳಿಸಿದರು.</p>.<p>ಮಂಗಳವಾರ ಮಧ್ಯಾಹ್ನ ಜೈಲಿಗೆ ಪತ್ನಿ ಮತ್ತು ಕುಟುಂಬ ಸದಸ್ಯರು ಬಂದಿದ್ದು, ಕೆಲ ಹೊತ್ತು ಅವರ ಜತೆ ಅನಿಲ್ ರಾಜ್ ಮಾತುಕತೆ ನಡೆಸಿದ್ದರು. ಈ ವೇಳೆ ಕುಟುಂಬ ಸದಸ್ಯರು ಮತ್ತು ಅನಿಲ್ರಾಜ್ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.</p>.<p>ಸಂಜೆ ಏಳು ಗಂಟೆ ಹೊತ್ತಿಗೆ ಅನಿಲ್ರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.</p>.<p>ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ತಿಳಿಯಲಿದೆ ಎಂದೂ ಅಧಿಕಾರಿ ಮಾಹಿತಿ ನೀಡಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂಥ್, ‘ಯಲಹಂಕ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಅನಿಲ್ ರಾಜ್ ಮಂಗಳವಾರ ಸಂಜೆ ಜೈಲಿನ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನ್ಯಾಯಾಂಗ ಬಂಧನದಲ್ಲೇ ಮೃತಪಟ್ಟಿರುವುದರಿಂದ ಮ್ಯಾಜಿಸ್ಟ್ರೇಟ್ ಬಂದುವಿಚಾರಣೆ ನಡೆಸುತ್ತಾರೆ’ ಎಂದರು.</p>.<p>ಅನಿಲ್ರಾಜ್ ತಮ್ಮ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆ. 30ರಂದು ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>